ಕರ್ನಾಟಕ

karnataka

ETV Bharat / bharat

ಪಂಜಾಬ್ ಮಾಜಿ ಸಿಎಂ ಅಮರಿಂದರ್​ ಪಕ್ಷ ಬಿಜೆಪಿಯಲ್ಲಿ ವಿಲೀನ: ಸೆ.19 ರಂದು ಮುಹೂರ್ತ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಸೆಪ್ಟೆಂಬರ್ 19 ರಂದು ಬಹುತೇಕ ವಿಲೀನ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಪಂಜಾಬ್ ಮಾಜಿ ಸಿಎಂ ಅಮರಿಂದರ್​ ಪಕ್ಷ
Punjab former CM Capt Amarinder Singh

By

Published : Sep 16, 2022, 11:12 AM IST

ಚಂಡೀಗಢ: ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಾವು ಹೊಸದಾಗಿ ರಚಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಪಕ್ಷವನ್ನು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ವಿಲೀನಗೊಳಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 19 ರಂದು ವಿಲೀನ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ. ಅವರು ಇತ್ತೀಚೆಗೆ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಲೀನದ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ಕೆಲವು ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಪಕ್ಷ ವಿಲೀನಕ್ಕೆ ಇದೇ ಸಂದರ್ಭದಲ್ಲಿ ಒಪ್ಪಿಗೆ ಸಿಕ್ಕಿದೆ ಎಂಬ ಊಹಾಪೋಹ ರಾಜಕೀಯ ವಲಯಗಳಲ್ಲಿ ಹಬ್ಬಿತ್ತು. ಈ ಬೆಳವಣಿಗೆಯು 2024 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಪಂಜಾಬ್ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರಬಹುದು.

ವಿಲೀನ ಪ್ರಕ್ರಿಯೆಯ ಭಾಗವಾಗಿ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಬಿಜೆಪಿ ಸದಸ್ಯತ್ವ ಪಡೆಯಲಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಜೊತೆಗೆ ಪಂಜಾಬ್‌ನ ಆರರಿಂದ ಏಳು ಮಾಜಿ ಶಾಸಕರು, ಅವರ ಪುತ್ರ ರಣಿಂದರ್ ಸಿಂಗ್, ಪುತ್ರಿ ಜೈ ಇಂದರ್ ಕೌರ್, ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರಲಿದ್ದಾರೆ.

ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ ಮತ್ತು ದಿನಾಂಕವನ್ನು ಅಂತಿಮಗೊಳಿಸಲು ಮಾಜಿ ಸಿಎಂ ದೆಹಲಿಗೆ ಭೇಟಿ ನೀಡಿದ್ದರು ಎಂದು ಕ್ಯಾಪ್ಟನ್ ಪುತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂಬುದನ್ನು ಸ್ಮರಿಸಬಹುದು. 2024 ರ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಅಮರಿಂದರ್ ಸಿಂಗ್ ಬಿಜೆಪಿಯ ಉನ್ನತ ನಾಯಕರೊಂದಿಗೆ ಒಂದು ಹಂತದ ಚರ್ಚೆಯನ್ನು ಮುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details