ಕರ್ನಾಟಕ

karnataka

By

Published : Feb 18, 2022, 5:58 PM IST

ETV Bharat / bharat

ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲದ ಐತೆಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸೇರಿ ಇಬ್ಬರು ಮಕ್ಕಳ ಸಹಿತ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ವಿಶಾಖಪಟ್ಟಣದವರು ಎಂದು ತಿಳಿದು ಬಂದಿದೆ.

four-killed-in-road-accident-at-chittors-aithepally
ಚಿತ್ತೂರಿನ ಐತೇಪಲ್ಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಚಿತ್ತೂರು(ಆಂಧ್ರಪ್ರದೇಶ): ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲದ ಐತೆಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಈ ದುರಂತ ಸಂಭವಿಸಿದೆ.

ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಮಕ್ಕಳ ಸಹಿತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ವಿಶಾಖಪಟ್ಟಣಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಓದಿ :92ರ ಅಜ್ಜ ಲಾಲಾ ಸಾಹೇಬ್‌ ಬಾಬರ್‌ಗೆ ಪಿಹೆಚ್‌ಡಿ ಪದವಿ.. ಹತ್ತಾರು ವೈಶಿಷ್ಟ್ಯವಿರುವ ಈ ಜೀವ ಎಲ್ರಿಗೂ ಪ್ರೇರಣೆ..

For All Latest Updates

TAGGED:

ABOUT THE AUTHOR

...view details