ತ್ರಿಪುರ :ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರದ ನಾಲ್ಕು ನಕ್ಸಲರು ಸಶಸ್ತ್ರ ಸಮೇತವಾಗಿ ಅಗರ್ತಾಲ ಪೊಲೀಸರಿಗೆ ಶರಣಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಮೂವರು ಗಡಿ ಫೆನ್ಸಿಂಗ್ ಕಾರ್ಮಿಕರನ್ನು ಅಪಹರಿಸಿದ್ದ ಇವರು, ಬಳಿಕ ಅವರನ್ನು ಬಿಡುಗಡೆಗೊಳಿಸಿ ಶರಣಾಗಿದ್ದಾರೆ.
ಗುರುವಾರ ಸಂಜೆ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಹಾನಿರ್ದೇಶಕ ವಿ ಎಸ್ ಯಾದವ್, "ಎನ್ಎಲ್ಎಫ್ಟಿ ಬಿಸ್ವಮೋಹನ್ ಸಂಘಟನೆಯ ನಕ್ಸಲರು ರಾಜ್ಯದ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಈ ಸಂಘಟನೆಯು ಆರ್ಥಿಕ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ" ಎಂದಿದ್ದಾರೆ.