ಗಿಡ್ಡಲುರ್ (ಆಂಧ್ರಪ್ರದೇಶ):ಅನಂತಪುರ-ಗುಂಟೂರು ರಾಷ್ಟ್ರೀಯ ಹೆದ್ದಾರಿಯ ಪ್ರಕಾಶಂ ಜಿಲ್ಲೆಯ ಕೊಮರೋಳು ಮಂಡಲದ ದಡ್ಡವಾಡ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಭಾರಿ ಅಗ್ನಿ ದುರಂತ ಸಂಭವಿಸಿದೆ. 300 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 100ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟಗೊಂಡಿವೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳೀಯರು ಮತ್ತು ಪೊಲೀಸರು ಹೇಳುವ ಪ್ರಕಾರ, ಭಾರತ್ ಗ್ಯಾಸ್ ಸಿಲಿಂಡರ್ಗಳೊಂದಿಗೆ ಕರ್ನೂಲ್ನಿಂದ ನೆಲ್ಲೂರು ಜಿಲ್ಲೆಯ ಉಳವಪಾಡು ಕಡೆಗೆ ಹೋಗುತ್ತಿದ್ದ ಲಾರಿಯ ಕ್ಯಾಬಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮೋಹನರಾಜು ಲಾರಿ ನಿಲ್ಲಿಸಿ ಕೆಳಗಿಳಿದು ಪರಾರಿಯಾಗಿದ್ದಾನೆ. ಸಂಪೂರ್ಣ ಗ್ಯಾಸ್ ಸಿಲಿಂಡರ್ಗಳು ಬೆಂಕಿಗಾಹುತಿಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ಅರ್ಧ ಕಿ.ಮೀ. ದೂರದಲ್ಲಿ ವಾಹನಗಳು ನಿಂತಿದ್ದವು. ಸ್ವಲ್ಪ ಹೊತ್ತಿನ ನಂತರ ಹೆಚ್ಚಿನ ಸಿಲಿಂಡರ್ಗಳು ಸ್ಫೋಟಗೊಳ್ಳಲು ಆರಂಭಿಸಿದ್ದು, ಪೊಲೀಸರು ಎಚ್ಚೆತ್ತುಕೊಂಡು ಅಲ್ಲಿಗೆ ಯಾರೂ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.