ಕರ್ನಾಟಕ

karnataka

ETV Bharat / bharat

ದೇಶದಲ್ಲಿ ವಿದ್ಯಾವಂತ ಯುವಕರಿಗೆ ಕೇಂದ್ರ ಸರ್ಕಾರ ದಂಡ ವಿಧಿಸುತ್ತಿದೆ: ರಾಹುಲ್ ಗಾಂಧಿ - ರಾಹುಲ್ ಗಾಂಧಿ

ವಿದ್ಯಾವಂತರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಂದ್ರದ ವಿರುದ್ಧ ರಾಹುಲ್​ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ

By

Published : Mar 17, 2021, 1:26 PM IST

ನವದೆಹಲಿ: ದೇಶದಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ. ಪದವಿ ಪಡೆದುಕೊಂಡಿದ್ದಾಕ್ಕಾಗಿ ಸರ್ಕಾರ ಅವರಿಗೆ ದಂಡ ವಿಧಿಸುತ್ತಿರುವಂತೆ ಕಾಣುತ್ತಿದೆ ಎಂದು ಕೆಂದ್ರದ ವಿರುದ್ಧ ರಾಹುಲ್​ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಾಪಕರ ಹುದ್ದೆ ಖಾಲಿ ಇದೆ. ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವಿದ್ಯಾವಂತರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಪದವಿ ಹೊಂದಿದ್ದಕ್ಕಾಗಿ ವಿಶೇಷವಾಗಿ ಒಬಿಸಿ, ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಇದಕ್ಕೆ ಸಂಬಂಧಪಟ್ಟಂತೆ ಐಐಟಿಗಳು ಮತ್ತು ಹಲವಾರು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಅಧ್ಯಾಪಕರ ಹುದ್ದೆಗಳನ್ನು ತೋರಿಸುವ ಟೇಬಲ್ ಅನ್ನು ಟ್ಯಾಗ್ ಮಾಡಿದ್ದಾರೆ. ಈ ಹಿಂದೆ ಕೆಲವು ಬಿಜೆಪಿ ನಾಯಕರ ಶೈಕ್ಷಣಿಕ ಪದವಿಗಳ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನೆಗಳನ್ನು ಎತ್ತಿದ್ದರು.

ABOUT THE AUTHOR

...view details