ಕರ್ನಾಟಕ

karnataka

ETV Bharat / bharat

ಆಹಾರ ಕಾಯ್ದೆಯಡಿ ಬಡವರಿಗೆ 1 ವರ್ಷದವರೆಗೆ ಉಚಿತ ಪಡಿತರ: ಕೇಂದ್ರದ ನಿರ್ಧಾರ - ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ತೀರ್ಮಾನ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

free-ration-to-poor-people-for-one-year
ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ

By

Published : Dec 23, 2022, 11:01 PM IST

ನವದೆಹಲಿ:ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರತಿ ವ್ಯಕ್ತಿಗೆ 5 ಕೆ.ಜಿ ಆಹಾರ ಧಾನ್ಯಗಳನ್ನು ಈ ಕಾಯ್ದೆಯಡಿ ಕೇಂದ್ರ ಒದಗಿಸುತ್ತದೆ. ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ಪ್ರತಿ ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯಲಿವೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರಿಗೆ ಒಂದು ಕೆಜಿ ಅಕ್ಕಿಯನ್ನು 3 ರೂ.ಗೆ ಮತ್ತು ಕೆಜಿ ಗೋಧಿಯನ್ನು 2 ರೂ. ಗೆ ನೀಡಲಾಗುತ್ತದೆ.

ಕೇಂದ್ರ ಸಚಿವ ಸಂಪುಟದ ನಿರ್ಧಾರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಚಿವ ಪಿಯೂಷ್ ಗೋಯಲ್, ಎನ್‌ಎಫ್‌ಎಸ್‌ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಇದಕ್ಕಾಗಿ ವಾರ್ಷಿಕ 2 ಲಕ್ಷ ಕೋಟಿ ರೂ. ಖರ್ಚಾಗಲಿದೆ ಎಂದು ಹೇಳಿದರು.

ಇದರ ಮಧ್ಯೆ, ಡಿಸೆಂಬರ್ 31 ರಂದು ಕೊನೆಗೊಳ್ಳಲಿರುವ ಉಚಿತ ಪಡಿತರ ಯೋಜನೆಯಾದ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ'ಯನ್ನು (ಪಿಎಂಜಿಕೆಎವೈ) ವಿಸ್ತರಿಸದಿರಲು ಸರ್ಕಾರ ನಿರ್ಧರಿಸಿದೆ. ಪಿಎಂಜಿಕೆಎವೈ ಅಡಿಯಲ್ಲಿ ಬರುವಂತಹ ಕುಟುಂಬಗಳು, ಎನ್‌ಎಫ್‌ಎಸ್‌ಎನ 81.35 ಕೋಟಿ ಫಲಾನುಭವಿಗಳ ಅಡಿಯಲ್ಲೇ ಬರಲಿದ್ದು ಪ್ರತಿ ವ್ಯಕ್ತಿಗೆ ತಿಂಗಳಿಗೆ ಐದು ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಇದು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಹೆಚ್ಚು ಸಬ್ಸಿಡಿ ಹೊಂದಿರುವ ಆಹಾರ ಧಾನ್ಯಗಳ ಮಾಸಿಕ ವಿತರಣೆಗಿಂತ ಹೆಚ್ಚಾಗಿರುತ್ತದೆ.

ಇದನ್ನೂ ಓದಿ:ಒನ್​ ರ‍್ಯಾಂಕ್, ಒನ್​ ಪಿಂಚಣಿ: 25 ಲಕ್ಷ ಮಾಜಿ ಯೋಧರಿಗೆ ಕೇಂದ್ರದಿಂದ ಶುಭಸುದ್ದಿ!

ABOUT THE AUTHOR

...view details