ಮೆಹಸಾನಾ(ಗುಜರಾತ್):2017ರಲ್ಲಿ ಅನುಮತಿ ಇಲ್ಲದೇ ಆಜಾದಿ ಮೆರವಣಿಗೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಇತರ ಒಂಬತ್ತು ಮಂದಿ ದೋಷಿಗಳು ಎಂದು ಗುಜರಾತ್ನ ಹೆಚ್ಚುವರಿ ಜ್ಯೂಡಿಸಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಹತ್ವದ ತೀರ್ಪು ಹೊರಡಿಸಿದೆ. ಇದರ ಜೊತೆಗೆ ಶಾಸಕ ಜಿಗ್ನೇಶ್ ಮೇವಾನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ಜೆಎ ಪರ್ಮಾರ್ ಈ ಆದೇಶ ಹೊರಡಿಸಿದ್ದು, ಶಾಸಕ ಜಿಗ್ನೇಶ್ ಮೇವಾನಿ, ಎನ್ಸಿಪಿ ಕಾರ್ಯಾಧ್ಯಕ್ಷೆ ರೇಷ್ಮಾ ಪಟೇಲ್ ಮತ್ತು ಜಿಗ್ನೇಶ್ ಮೇವಾನಿ ಅವರ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ನ ಕೆಲವು ಸದಸ್ಯರು ಸೇರಿದಂತೆ ಒಂಬತ್ತು ಮಂದಿಯನ್ನು ಆರೋಪಿಗಳು ಎಂದು ಘೋಷಣೆ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143ರ ಅಡಿ ಈ ತೀರ್ಪು ನೀಡಲಾಗಿದೆ. ನ್ಯಾಯಾಲಯ ಎಲ್ಲ ಅಪರಾಧಿಗಳಿಗೆ ತಲಾ ಒಂದು ಸಾವಿರ ರೂಪಾಯಿ ದಂಡ ವಿಧಿಸಿದೆ.