ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು.. ಇಬ್ಬರು ಭಯೋತ್ಪಾದಕರ ಹುಟ್ಟಡಗಿಸಿದ ಭದ್ರತಾ ಪಡೆಗಳು

ಕಾಶ್ಮೀರದಲ್ಲಿ ಭಯೋತ್ಪಾದಕರ ಹುಟ್ಟಡಗಿಸುವ ಕಾರ್ಯ ಮುಂದುವರಿದಿದೆ. ಇಂದು ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯ ರಂಗ್ರೆತ್ ಎಂಬಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

By

Published : Dec 13, 2021, 3:19 PM IST

gunfight
ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು

ಶ್ರೀನಗರ:ಕಾಶ್ಮೀರದಲ್ಲಿ ಭಯೋತ್ಪಾದಕರ ಹುಟ್ಟಡಗಿಸುವ ಕಾರ್ಯ ಮುಂದುವರಿದಿದೆ. ಇಂದು ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯ ರಂಗ್ರೆತ್ ಎಂಬಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ರಂಗ್ರೇತ್​ ಪ್ರದೇಶದಲ್ಲಿ ಭಯೋತ್ಪಾದಕರಿಬ್ಬರು ಅಡಗಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಭದ್ರತಾ ಪಡೆಗಳು ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಹತರಾಗಿದ್ದಾರೆ. ಅವರ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್​​ನಿಂದ ಬಂದ ಇಬ್ಬರು ಮಕ್ಕಳು ಸೇರಿ ಐವರಿಗೆ ಕೊರೊನಾ

ಭಯೋತ್ಪಾದಕರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದಾಗ, ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details