ಕರ್ನಾಟಕ

karnataka

ಹಿಟ್​ ಅಂಡ್​ ರನ್​... ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ!

By

Published : Nov 10, 2020, 7:04 AM IST

ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

Six people killed in Road accident, Hit and Run: Six people killed in Road accident at Sangareddy, Sangareddy Road accident, Sangareddy Road accident news, Hit and Run, Sangareddy Hit and Run, Sangareddy Hit and Run news, ರಸ್ತೆ ಅಪಘಾತದಲ್ಲಿ ಆರು ಜನ ಸಾವು, ಸಂಗಾರೆಡ್ಡಿಯಲ್ಲಿ ರಸ್ತೆ ಅಪಘಾತದಲ್ಲಿ ಆರು ಜನ ಸಾವು, ಸಂಗಾರೆಡ್ಡಿ ರಸ್ತೆ ಅಪಘಾತ, ಸಂಗಾರೆಡ್ಡಿ ರಸ್ತೆ ಅಪಘಾತ ಸುದ್ದಿ, ಹಿಟ್​ ಆ್ಯಂಡ್​ ರನ್​, ಸಂಗಾರೆಡ್ಡಿ ಹಿಟ್​ ಆ್ಯಂಡ್​ ರನ್​, ಸಂಗಾರೆಡ್ಡಿ ಹಿಟ್​ ಆ್ಯಂಡ್​ ರನ್ ಸುದ್ದಿ,
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ

ಸಂಗಾರೆಡ್ಡಿ: ಅಪರಿಚಿತ ವಾಹನವೊಂದು ಬೊಲೆರೋ ಕಾರ್​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುತ್ತಂಗಿ ಔಟರ್​ ರಿಂಗ್​ ರೋಡ್​ನಲ್ಲಿ ನಡೆದಿದೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ

ಇಲ್ಲಿನ ಔಟರ್​ ರಿಂಗ್​ ರೋಡ್​ನಲ್ಲಿ ಭಯಾನಕವಾಗಿ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನವೊಂದು ಬೊಲೆರೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮಗುಚಿ ಬಿದ್ದು, ಕಾರಿನಲ್ಲಿದ್ದ ಜಾರ್ಖಂಡ್​ನ ಆರು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ

10 ಜನರು ಹೈದರಾಬಾದ್​ನಿಂದ ಜಾರ್ಖಂಡ್​ಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ

ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಅಪರಿಚಿತ ವಾಹನದ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ದುರ್ಮರಣ

ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಂಡಿದೆ.

ABOUT THE AUTHOR

...view details