ಕರ್ನಾಟಕ

karnataka

ETV Bharat / bharat

ಕೇರಳ ದಾದಿಯರಿಗೆ ಹಿಂದಿ/ಇಂಗ್ಲಿಷ್‌ನಲ್ಲಿ ಮಾತನಾಡಲು ದೆಹಲಿ ಆಸ್ಪತ್ರೆ ಆದೇಶ: ಕೈ ನಾಯಕರ ಆಕ್ರೋಶ - Hospital in Delhi orders nursing staff to use Hindi or English

ಜಿಐಪಿಎಂಇಆರ್​ನಲ್ಲಿ ಕೆಲಸದ ಸ್ಥಳಗಳಲ್ಲಿ ಸಂವಹನಕ್ಕಾಗಿ ಮಲಯಾಳಂ ಭಾಷೆಯನ್ನು ಬಳಸಲಾಗುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಹಾಗಾಗಿ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸುವಂತೆ ಎಲ್ಲಾ ನರ್ಸಿಂಗ್ ಸಿಬ್ಬಂದಿಗೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

Hospital in Delhi orders nursing staff to use Hindi or English, not Malayalam
ಕೇರಳ ದಾದಿಯರಿಗೆ ಹಿಂದಿ/ಇಂಗ್ಲಿಷ್‌ನಲ್ಲಿ ಮಾತನಾಡಲು ದೆಹಲಿ ಆಸ್ಪತ್ರೆ ಆದೇಶ

By

Published : Jun 6, 2021, 9:00 AM IST

Updated : Jun 6, 2021, 9:08 AM IST

ನವದೆಹಲಿ: ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್​ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನ ಎಲ್ಲಾ ಶುಶ್ರೂಷಾ ಸಿಬ್ಬಂದಿಯನ್ನು ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸುವಂತೆ ನಿರ್ದೇಶಿಸಿದೆ. ಇತರ ಭಾಷೆಗಳಲ್ಲಿ ಮಾತನಾಡುವ ಯಾರಾದರೂ ವಿರುದ್ಧ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕರು ಹೊರಡಿಸಿದ ಸುತ್ತೋಲೆ:

"ಮಲಯಾಳಂ ಭಾಷೆಯ ಬಳಕೆಯ ವಿರುದ್ಧ ಜಿಐಪಿಎಂಇಆರ್​ಗೆ ದೂರು ಬಂದಿದೆ" ಎಂದು ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕರು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

"ಜಿಐಪಿಎಂಇಆರ್​ನಲ್ಲಿ ಕೆಲಸದ ಸ್ಥಳಗಳಲ್ಲಿ ಸಂವಹನಕ್ಕಾಗಿ ಮಲಯಾಳಂ ಭಾಷೆಯನ್ನು ಬಳಸಲಾಗುತ್ತಿದೆ ಎಂಬ ಬಗ್ಗೆ ದೂರು ಬಂದಿದೆ. ಆದರೆ ಗರಿಷ್ಠ ರೋಗಿಗಳು ಮತ್ತು ಸಹೋದ್ಯೋಗಿಗಳು ಈ ಭಾಷೆಯನ್ನು ತಿಳಿದಿಲ್ಲ. ಇದರಿಂದ ಸಾಕಷ್ಟು ಅನಾನುಕೂಲತೆಗಳು ಉಂಟಾಗುತ್ತವೆ. ಆದ್ದರಿಂದ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಅನ್ನು ಮಾತ್ರ ಬಳಸುವಂತೆ ಎಲ್ಲಾ ನರ್ಸಿಂಗ್ ಸಿಬ್ಬಂದಿಗೆ ನಿರ್ದೇಶಿಸಲಾಗಿದೆ. ಇಲ್ಲದಿದ್ದರೆ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಎಚ್ಚರಿಸಿದ್ದಾರೆ.

ಸುತ್ತೋಲೆ ಕೂಡಲೇ ಹಿಂತೆಗೆದುಕೊಳ್ಳುವಂತೆ ಒತ್ತಾಯ:

"ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಜಿಐಪಿಎಂಇಆರ್ ಅಧಿಕಾರಿಗಳು ಹೊರಡಿಸಿರುವ 'ಅಸಂವಿಧಾನಿಕ' ಸುತ್ತೋಲೆಯನ್ನು ಕೂಡಲೇ ಹಿಂತೆಗೆದುಕೊಳ್ಳುವಂತೆ ಆದೇಶಿಸಬೇಕು".

- ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್

"ಕೇರಳದ ದಾದಿಯರು ಪ್ರಪಂಚದಾದ್ಯಂತ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಮತ್ತು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಸ್ವಾಭಾವಿಕವಾಗಿ, ಅದೇ ಪ್ರದೇಶಕ್ಕೆ ಸೇರಿದ ದಾದಿಯರು ತಮ್ಮ ಮಾತೃಭಾಷೆಯಾಗಿರುವುದರಿಂದ ತಮ್ಮಲ್ಲಿಯೇ ಭಾಷೆಯನ್ನು ಮಾತನಾಡುತ್ತಾರೆ. ಸುತ್ತೋಲೆ ನಿಸ್ಸಂದೇಹವಾಗಿ, ತಾರತಮ್ಯ ಮತ್ತು ಸಂವಿಧಾನದಿಂದ ಖಾತರಿಪಡಿಸಿದ ಮೂಲಭೂತ ಹಕ್ಕನ್ನು ನಿರಾಕರಿಸುತ್ತಿದೆ" ಎಂದು ಕಾಂಗ್ರೆಸ್ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ಸುತ್ತೋಲೆ ಮಾನವ ಹಕ್ಕುಗಳ ಉಲ್ಲಂಘನೆ- ಶಶಿ ತರೂರ್

"ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತದಲ್ಲಿ ಇದು ಸ್ವೀಕಾರಾರ್ಹವಲ್ಲ. ಭಾರತೀಯ ನಾಗರಿಕರ ಮೂಲಭೂತ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ."

- ತಿರುವನಂತಪುರಂ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್

Last Updated : Jun 6, 2021, 9:08 AM IST

For All Latest Updates

ABOUT THE AUTHOR

...view details