ಕರ್ನಾಟಕ

karnataka

ETV Bharat / bharat

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ... ಮಕ್ಕಳ ಮೇಲೆಯೂ ಹಲ್ಲೆ - ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ

ಪತಿಯೊಬ್ಬ ತನ್ನ ಹೆಂಡತಿ ಮತ್ತು ಆತನ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದು, ಮಕ್ಕಳಿಬ್ಬರಿಗೆ ಗಾಯಗಳಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

Neb Sarai murded  Husband killed wife in Delhi  attacked son and daughter with ax  Husband kills wife with ax in Delhi  also attacks son and daughter too  ಹೆಂಡತಿ ಮತ್ತು ಆತನ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ  ಮಕ್ಕಳಿಬ್ಬರಿಗೆ ಗಾಯಗಳಾಗಿರುವ ಘಟನೆ ದೆಹಲಿ  ದಕ್ಷಿಣ ದಿಲ್ಲಿಯ ನೆಬ್ ಸರೈ ಪೊಲೀಸ್ ಠಾಣೆ  ಇಂದಿರಾ ಎನ್‌ಕ್ಲೇವ್‌ನಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ  ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಪತಿ  ಹಾಸಿಗೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆ  2017ರಲ್ಲಿಯೂ ಇವರ ನಡುವೆ ಜಗಳ
ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ.

By

Published : Apr 28, 2023, 9:06 AM IST

ನವದೆಹಲಿ:ದಕ್ಷಿಣ ದಿಲ್ಲಿಯ ನೆಬ್ ಸರೈ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಎನ್‌ಕ್ಲೇವ್‌ನಲ್ಲಿ ಬೆಚ್ಚಿ ಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ದೆಹಲಿ ಪೊಲೀಸರ ಪ್ರಕಾರ ಈ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ವ್ಯಕ್ತಿಯೊಬ್ಬರು ಬೆಳಗ್ಗೆ 6.24ಕ್ಕೆ ಪಿಸಿಆರ್​ಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದರು ಎಂದು ಪೊಲೀಸ್​ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಿಸಿಆರ್​ಗೆ ಕರೆ ಬಂದಾಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ದೌಡಾಯಿಸಿತು. ಹಾಸಿಗೆಯ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ದೇಹವಿತ್ತು. ಅವರ ಕುತ್ತಿಗೆಯಲ್ಲಿ ಹಲವು ಗಾಯಗಳ ಗುರುತುಗಳಿದ್ದವು. ಅಲ್ಲದೆ 30 ವರ್ಷದ ಮಗಳು ಮತ್ತು 28 ವರ್ಷದ ಮಗ ಸಹ ಈ ಘಟನೆಯಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಂದೆ ವಿಜಯ್ ವೀರ್ ಎಂಬುವರು ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಆರೋಪಿ ಪತಿ ವಿಜಯ್ ವೀರ್ ಕೂಡ ಇದ್ದರು. ಅವರ ಎಡಗೈಗೂ ಗಾಯವಾಗಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ: ವಿಚಾರಣೆ ವೇಳೆ ಸುಮನ್ (ಮೃತ) ಆರೋಪಿ ವಿಜಯ್ ವೀರ್ ನನ್ನು 1992ರಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಒಬ್ಬ ಮಗಳು ಮತ್ತು ಒಬ್ಬ ಮಗ ಇದ್ದಾನೆ. ವಿಜಯ್ ವೀರ್ ಗರ್ಮುಕ್ತೇಶ್ವರ ಯುಪಿ ನಿವಾಸಿ. ಮದುವೆಯ ನಂತರ ಅವರು ನೆಬ್ ಸರೈನಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದರು. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದು, ಕುಟುಂಬದತ್ತ ಗಮನ ಹರಿಸುತ್ತಿರಲಿಲ್ಲ. ಹೀಗಾಗಿ ಹೆಂಡತಿ ಆತನನ್ನು ವಿರೋಧಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ವಿಜಯ್​ ವೀರ್​ ಪತ್ನಿಗೆ ಚಿತ್ರಹಿಂಸೆ ನೀಡಿ ಥಳಿಸುತ್ತಿದ್ದ. ಮಕ್ಕಳಿಬ್ಬರೂ ತಾಯಿಗೆ ಆಸರೆಯಾಗುತ್ತಿದ್ದರು. ಹೀಗಾಗಿ ವಿಜಯ್​ ವೀರ್​ ತಮ್ಮ ಮಕ್ಕಳ ಮೇಲೂ ದೌರ್ಜನ್ಯ ತೋರುತ್ತಿದ್ದನು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ ಹಿಂದೆಯೂ ನಡೆದಿತ್ತು ಗಲಾಟೆ: 2017ರಲ್ಲಿಯೂ ಇವರ ನಡುವೆ ಜಗಳ ನಡೆದಿದ್ದು, ಈ ವೇಳೆ ಆರೋಪಿ ಪತಿ ತನ್ನ ಕುಟುಂಬವನ್ನು ಕೊಂದು ಹಾಕಲು ಗುಂಡು ಹಾರಿಸಿದ್ದ ಎನ್ನಲಾಗಿದೆ. ಆ ಸಮಯ ಗಲಾಟೆಯಲ್ಲಿ ವಿಜಯ್​ ವೀರ್​ ತಮ್ಮ ಮಗನಿಗೆ ಗುಂಡು ಹಾರಿಸಿದ್ದರು. ಅದೃಷ್ಟವಶಾತ್​ ಆ ವೇಳೆ ಮಗನಿಗೆ ಯಾವುದೇ ಗಾಯಗಳಾಗಿರಲಿಲ್ಲ. ಈ ಘಟನೆ ಕುರಿತು ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ವಿಜಯ್ ವೀರ್​​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಪರಸ್ಪರ ಮಾತುಕತೆ ನಡೆಸಿ ಪ್ರಕರಣ ರದ್ದುಪಡಿಸಲಾಯಿತು.

ಆ ನಂತರ ವಿಜಯ್ ವೀರ್ ಮತ್ತೆ ಕುಟುಂಬಕ್ಕೆ ಚಿತ್ರಹಿಂಸೆ ನೀಡಲಾರಂಭಿಸಿದ. ಗುರುವಾರ ಬೆಳಗ್ಗೆ ತನ್ನ ಕುಟುಂಬವನ್ನು ಕೊಂದು ಹಾಕಲು ಪತ್ನಿ ಮಲಗಿದ್ದ ವೇಳೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಪತ್ನಿಯನ್ನು ಕೊಂದ ಬಳಿಕ ಮಕ್ಕಳ ಕೋಣೆಗೆ ತೆರಳಿ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಕ್ಕಳಿಬ್ಬರು ತಮ್ಮ ತಂದೆ ವಿಜಯ್​ ವೀರ್​ನನ್ನು ಕೊಠಡಿಯೊಳಗೆ ಕೂಡಿ ಹಾಕಿ ಬೀಗ ಜಡಿದಿದ್ದಾರೆ. ಬಳಿಕ ಪೊಲೀಸರಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಿದ್ದರು. ಸದ್ಯ ಪೊಲೀಸರು ಈ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಆರಂಭಿಸಿದ್ದಾರೆ.

ಓದಿ:ಗುವಾಹಟಿಯಿಂದ ಜೈಪುರಕ್ಕೆ ಹೊರಟಿದ್ದ ವಿಮಾನ ರದ್ದು: ಆಕ್ರೋಶಗೊಂಡ ಪ್ರಯಾಣಿಕರಿಂದ ಗಲಾಟೆ

ABOUT THE AUTHOR

...view details