ಕರ್ನಾಟಕ

karnataka

ETV Bharat / bharat

ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೆರಿಟ್​​​​ ನಿರ್ಲಕ್ಷಿಸುವುದು ಸಂವಿಧಾನದ ಉಲ್ಲಂಘನೆ - ಜಾರ್ಖಂಡ್​​ ಹೈಕೋರ್ಟ್

43 ಸಬ್​​​ಇನ್ಸ್​​ಪೆಕ್ಟರ್ ನೇಮಕಾತಿಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಅಕ್ರಮವಾಗಿದ್ದರೂ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತ್ತು. ಸಾರ್ವಜನಿಕ ರಂಗದ ಉದ್ಯೋಗಕ್ಕೆ ಆಯ್ಕೆಗಳು ಅರ್ಹತೆಯ ಆಧಾರದ ಮೇಲೆ ಇರಬೇಕೆಂಬುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟಿತು.

ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​

By

Published : Feb 25, 2021, 3:25 PM IST

ನವದೆಹಲಿ: ಸರ್ಕಾರಿ ಉದ್ಯೋಗದ ನೇಮಕಾತಿಗಳು ಅರ್ಹತೆಯ ಆಧಾರದ ಮೇಲೆ ನಡೆಯಬೇಕು. ಕಡಿಮೆ ಅಂಕ ಪಡೆದವರನ್ನು ನೇಮಕ ಮಾಡಿಕೊಳ್ಳುವುದು ಮತ್ತು ಹೆಚ್ಚು ಅಂಕ ಪಡೆದ ಅಭ್ಯರ್ಥಿಯನ್ನು ನಿರ್ಲಕ್ಷಿಸುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂಕೋರ್ಟ್​​​​ ತಿಳಿಸಿದೆ.

ನ್ಯಾ. ಎಲ್.​​ ನಾಗೇಶ್ವರ್ ರಾವ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠವು ಜಾರ್ಖಂಡ್​​ ಹೈಕೋರ್ಟ್​ ತೀರ್ಪನ್ನು ಎತ್ತಿಹಿಡಿದಿದ್ದು, ಅತೀ ಹೆಚ್ಚು ಅಂಕ ಪಡೆದು ಸಬ್​ ಇನ್ಸ್​ಪೆಕ್ಟರ್​ ಹುದ್ದೆಗೆ ಆಯ್ಕೆಯಾಗಿದ್ದ 43 ಮಂದಿಯ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ನಡೆಸಲು ಅನುಮತಿ ನೀಡಲಾಯಿತು.

2008ರಲ್ಲಿ ಜಾರ್ಖಂಡ್ ಸರ್ಕಾರದ ಗೃಹ ಇಲಾಖೆಯಿಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು, ಅಟೆಂಡೆಂಟ್‌ಗಳು (ಸಾರ್ಜೆಂಟ್) ಮತ್ತು ಕಂಪನಿ ಕಮಾಂಡರ್‌ಗಳ ಹುದ್ದೆಗಳ ನೇಮಕಾತಿಗಾಗಿ ಜಾಹೀರಾತು ನೀಡಲಾಗಿತ್ತು.

ಬಳಿಕ ಅಂತಿಮ ಫಲಿತಾಂಶವನ್ನು ಪ್ರಕಟಿಸಿ 382 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ ನಂತರ ಆಯ್ಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿತು. ಈ ಕುರಿತು ಹುದ್ದೆಗೆ ಆಯ್ಕೆಯಾಗದೆ ಉಳಿದ ಅಭ್ಯರ್ಥಿಗಳು ರಾಂಚಿಯ ಜಾರ್ಖಂಡ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವಾಗ 43 ಸಬ್​​​ಇನ್ಸ್​​ಪೆಕ್ಟರ್​ಗಳ ಆಯ್ಕೆಯನ್ನು ತಡೆಹಿಡಿಯಲಾಗಿತ್ತು. ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ನೇತೃತ್ವದ ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಸಿದ್ಧಪಡಿಸಿದ ಪರಿಷ್ಕೃತ ಆಯ್ಕೆ ಪಟ್ಟಿಯ ಆಧಾರದ ಮೇಲೆ 43 ಜನರನ್ನು ನೇಮಿಸಲಾಗಿತ್ತು. ಬಳಿಕ 43 ಸಬ್​​​ಇನ್ಸ್​​ಪೆಕ್ಟರ್ ನೇಮಕಾತಿಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಅಕ್ರಮವಾಗಿದ್ದರೂ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತ್ತು

ಸಾರ್ವಜನಿಕ ರಂಗದ ಉದ್ಯೋಗಕ್ಕೆ ಆಯ್ಕೆಗಳು ಅರ್ಹತೆಯ ಆಧಾರದ ಮೇಲೆ ಇರಬೇಕೆಂಬುದರಲ್ಲಿ ಸಂದೇಹವಿಲ್ಲ. ಕಡಿಮೆ ಅರ್ಹತೆ ಹೊಂದಿರುವ ವ್ಯಕ್ತಿಗಳ ನೇಮಕ ಹಾಗೂ ಹೆಚ್ಚಿನ ಅಂಕಗಳನ್ನು ಪಡೆದವರನ್ನು ನಿರ್ಲಕ್ಷಿಸುವುದು ಭಾರತದ ಸಂವಿಧಾನದ 14 ಮತ್ತು 16 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಪೀಠ ಕಳೆದ ವಾರದ ತೀರ್ಪು ನೀಡಿತ್ತು.

ಈ ಹಿನ್ನೆಲೆ ಈಗಾಗಲೇ ಆಯ್ಕೆಯಾಗಿ ರಾಜ್ಯ ಪೊಲೀಸ್ ಸೇವೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವವರ ಮೇಲೆ ಕ್ರಮ ಜರುಗಿಸಲಾಗುವುದಿಲ್ಲ, ಇದರಲ್ಲಿ ಅವರ ತಪ್ಪು ಕಂಡುಬಂದಿಲ್ಲ ಎಂದಿತ್ತು.

ಇದನ್ನೂ ಓದಿ: ಕೇವಲ 3 ಡಿಗ್ರಿ ತಾಪಮಾನದಲ್ಲಿ 108 ಸೂರ್ಯ ನಮಸ್ಕಾರ ಮಾಡಿದ ತೆಲಂಗಾಣದ ಯುವಕ

ABOUT THE AUTHOR

...view details