ಕರ್ನಾಟಕ

karnataka

By

Published : Aug 14, 2022, 7:39 AM IST

Updated : Aug 14, 2022, 8:22 AM IST

ETV Bharat / bharat

ಕಳೆದ 4 ವರ್ಷಗಳಲ್ಲಿ ಶೇ 35 ರಷ್ಟು ಕಡಿಮೆಯಾದ ಭಾರತದ ಶಸ್ತ್ರಾಸ್ತ್ರ ಆಮದು

ಬಲಿಷ್ಠ ಸೇನೆ ನಿರ್ಮಿಸಲು ಹಾಗು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ರಕ್ಷಣಾ ಸಚಿವಾಲಯ ಹಲವು ಸುಧಾರಣೆಗಳನ್ನು ಕೈಗೊಂಡಿದ್ದೇ ಇದಕ್ಕೆ ಕಾರಣ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Defence Minister Rajnath Singh
ರಾಜನಾಥ್ ಸಿಂಗ್

ರಾಜಸ್ಥಾನ: ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯ ಮೇಲೆ ಯಾರ ಕೆಂಗಣ್ಣೂ ಬೀಳಬಾರದೆಂದು ಭಾರತ ಸರ್ಕಾರವು ದೃಢವಾದ ಭದ್ರತಾ ವ್ಯವಸ್ಥೆಯನ್ನು ರಚಿಸುತ್ತಿದೆ. ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವವರಿಗೆ ತಕ್ಕ ಉತ್ತರ ನೀಡಲಾಗುವುದು. ಜನರ ಸುರಕ್ಷತೆಯೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಸಲ್ವಾ ಕಲನ್ ಗ್ರಾಮದಲ್ಲಿ ವೀರ್ ದುರ್ಗಾದಾಸ್ ರಾಥೋಡ್ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭವಿಷ್ಯದ ಎಲ್ಲಾ ಬೆದರಿಕೆಗಳನ್ನು ಎದುರಿಸಲು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡಲು ನಮ್ಮ ಸಶಸ್ತ್ರ ಪಡೆಗಳು ಸಜ್ಜಾಗಿವೆ. ‘ಆತ್ಮನಿರ್ಭರ್ ಭಾರತ್ ಅಭಿಯಾನ’ ಅಡಿಯಲ್ಲಿ ಸಶಸ್ತ್ರ ಪಡೆಗಳಿಗೆ ಸ್ಥಳೀಯ ಶಸ್ತ್ರಾಸ್ತ್ರಗಳು ಮತ್ತು ವೇದಿಕೆಗಳನ್ನು ತಯಾರಿಸಲು ರಕ್ಷಣಾ ಸಚಿವಾಲಯವು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ. ಇದರ ಪರಿಣಾಮ ಕಳೆದ 4 ವರ್ಷಗಳಲ್ಲಿ ದೇಶದ ಶಸ್ತ್ರಾಸ್ತ್ರಗಳ ಆಮದು ಪ್ರಮಾಣ ಶೇಕಡಾ 48 ರಿಂದ 68 ಕ್ಕೆ ಇಳಿದಿದೆ ಎಂದು ಅವರು ಹೇಳಿದರು.

ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ವಿರೋಧ ಪಕ್ಷಗಳ ಟೀಕೆಗೆಗಳಿಗೆ ಪ್ರತಿಕ್ರಿಯಿಸಿ, ಅವರನ್ನು ನಮ್ಮ ಭೂಪ್ರದೇಶ ಪ್ರವೇಶಿಸಲು ಬಿಟ್ಟಿಲ್ಲ. ದೇಶದ ಭದ್ರತೆ ಮತ್ತು ಗೌರವದ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.

ಇದನ್ನೂ ಓದಿ:ಕೇರಳದಲ್ಲಿನ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಅಂತ್ಯ ಹಾಡಲಿದೆ: ರಾಜನಾಥ್ ಸಿಂಗ್

Last Updated : Aug 14, 2022, 8:22 AM IST

ABOUT THE AUTHOR

...view details