ಕರ್ನಾಟಕ

karnataka

ETV Bharat / bharat

ಉಕ್ರೇನ್​ನ ಬುಚಾದಲ್ಲಿ ನಾಗರಿಕರ ಹತ್ಯೆ: ಭಾರತ ಖಂಡನೆ, ತನಿಖೆಗೆ ಒತ್ತಾಯ - ರಷ್ಯಾದ ಆಕ್ರಮಣವನ್ನು ಖಂಡಿಸಿದ ಭಾರತ

ಉಕ್ರೇನ್​ನ ಬುಚಾ ಎಂಬಲ್ಲಿ ನಾಗರಿಕರ ಮಾರಣಹೋಮ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ.

India at the UNSC condemns civilian killings in Bucha
ಉಕ್ರೇನ್​ನ ಬುಚಾದಲ್ಲಿ ನಾಗರಿಕರ ಹತ್ಯೆ: ಭಾರತ ಖಂಡನೆ, ತನಿಖೆಗೆ ಒತ್ತಾಯ

By

Published : Apr 6, 2022, 8:54 AM IST

ನವದೆಹಲಿ:ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. ಉಕ್ರೇನ್​ನ ಬುಚಾ ಎಂಬಲ್ಲಿ ನಾಗರಿಕರ ಮಾರಣಹೋಮ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ. ಉಕ್ರೇನ್ ಕುರಿತಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಬುಚಾದಲ್ಲಿ ನಾಗರಿಕರ ಹತ್ಯೆಗಳಿಂದ ನಾವು ಸಾಕಷ್ಟು ವಿಚಲಿತರಾಗಿದ್ದೇವೆ. ಇದನ್ನು ನಾವು ಖಂಡಿಸುತ್ತೇವೆ ಮತ್ತು ಸ್ವತಂತ್ರ ತನಿಖೆಗೆ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಮಾನವೀಯ ಮತ್ತು ವೈದ್ಯಕೀಯ ಸರಬರಾಜುಗಳನ್ನು ಪೂರೈಸುವುದನ್ನು ನಾವು ಬೆಂಬಲಿಸುತ್ತೇವೆ. ಉಕ್ರೇನ್‌ನಲ್ಲಿನ ಭೀಕರ ಮಾನವೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತವು ಉಕ್ರೇನ್ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳಿಗೆ ಅಗತ್ಯ ವಸ್ತುಗಳನ್ನು ಕಳುಹಿಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಉಕ್ರೇನ್‌ಗೆ ಇನ್ನೂ ಹೆಚ್ಚಿನ ಮಾನವೀಯ ಬೆಂಬಲ ನೀಡುತ್ತೇವೆ.

ಇದರೊಂದಿಗೆ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಲು ರಷ್ಯಾ ಮತ್ತು ಉಕ್ರೇನ್ ನಡುವೆ ನೇರ ಮಾತುಕತೆಗೆ ಭಾರತ ಕರೆ ನೀಡುತ್ತಿದೆ. ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಹಲವಾರು ಬಾರಿ ಮಾತುಕತೆಗೆ ಕರೆ ನೀಡಿದ್ದಾರೆ ಎಂದು ಟಿಎಸ್ ತಿರುಮೂರ್ತಿ ಹೇಳಿದ್ದಾರೆ.

ಮುಗ್ಧ ಜೀವಗಳು ಅಪಾಯದಲ್ಲಿರುವಾಗ ಎರಡೂ ರಾಷ್ಟ್ರಗಳಿಗೆ ರಾಜತಾಂತ್ರಿಕತೆ ಆಯ್ಕೆಯಾಗಿರಬೇಕು. ವಿಶ್ವಸಂಸ್ಥೆಯ ಒಳಗೆ ಮತ್ತು ಹೊರಗೆ ಎರಡೂ ರಚನಾತ್ಮಕವಾಗಿ ಕೆಲಸ ಮಾಡುವುದು ನಮ್ಮ ಸಾಮೂಹಿಕ ಹಿತಾಸಕ್ತಿಯಾಗಿದೆ. ಈ ಸಭೆಯಲ್ಲಿ ಭಾಗಿಯಾಗಿರುವ ರಾಷ್ಟ್ರಗಳು ರಷ್ಯಾ - ಉಕ್ರೇನ್ ಸ್ಥಿತಿಯನ್ನು ಸುಧಾರಿಸಲು ನಿರಂತರ ಪ್ರಯತ್ನಗಳನ್ನು ಮಾಡುವುದನ್ನು ನಾವು ಗಮನಿಸುತ್ತಿದ್ದೇವೆ ಎಂದು ಟಿ.ಎಸ್.ತಿರುಮೂರ್ತಿ ಹೇಳಿದ್ದಾರೆ.

ಸಂಘರ್ಷದ ವೇಳೆ ಇದೇ ಮೊದಲ ಬಾರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿ ಕಳವಳ ವ್ಯಕ್ತಪಡಿಸಿದರು. ಉಕ್ರೇನ್​​ನಲ್ಲಿ ರಷ್ಯನ್ನರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಸಭೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ ಗುಟೆರೆಸ್, ರಾಜಕೀಯ ಮತ್ತು ಶಾಂತಿ ನಿರ್ಮಾಣ ವ್ಯವಹಾರಗಳ ಅಂಡರ್ ಸೆಕ್ರೆಟರಿ ಜನರಲ್ ರೋಸ್ಮರಿ ಡಿಕಾರ್ಲೊ, ಮಾನವೀಯ ವ್ಯವಹಾರಗಳು ಮತ್ತು ತುರ್ತುಸ್ಥಿತಿಯ ಅಂಡರ್ - ಸೆಕ್ರೆಟರಿ-ಜನರಲ್ ಮಾರ್ಟಿನ್ ಗ್ರಿಫಿತ್ಸ್ ಅವರು ಕೂಡಾ ಭಾಷಣ ಮಾಡಿದರು.

ಇದನ್ನೂ ಓದಿ:ಬಿಜೆಪಿ ಸಂಸ್ಥಾಪನಾ ದಿನ 2022: ಕಾರ್ಯಕರ್ತರು, ಶಾಸಕರ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ABOUT THE AUTHOR

...view details