ಕರ್ನಾಟಕ

karnataka

By

Published : Jul 27, 2023, 9:56 AM IST

ETV Bharat / bharat

PM Modi: ಬಿಜೆಪಿಯ 3ನೇ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಒಂದಾಗಲಿದೆ: ಮೋದಿ ಭರವಸೆ

PM Modi on Indian economy: ಮುಂದಿನ 25 ವರ್ಷಗಳಲ್ಲಿ ಬಡತನ ನಿರ್ಮೂಲನೆ ಮಾಡುವ ಜೊತೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.

modi
ಮೋದಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಮೂರನೇ ಅವಧಿಯ ಭರವಸೆಗಳ ನೀಲನಕ್ಷೆಯನ್ನು ಪ್ರಸ್ತುತಪಡಿಸುವ ಸಂದರ್ಭದಲ್ಲಿ ಪ್ರಸ್ತುತಕ್ಕಿಂತ ವೇಗದ ಬೆಳವಣಿಗೆಯೊಂದಿಗೆ ಭಾರತವನ್ನು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವನ್ನಾಗಿ ಮಾಡುವ ಭರವಸೆ ನೀಡಿದರು.

ಪ್ರಧಾನಿ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಮುಂದಿನ ವರ್ಷದ ಮೇ ತಿಂಗಳಲ್ಲಿ ತನ್ನ 10 ವರ್ಷಗಳನ್ನು ಪೂರೈಸಲಿದೆ. ಅಭಿವೃದ್ಧಿ ವಿಚಾರದಲ್ಲಿ ಮೂರನೇ ಅವಧಿಗೆ ಚುನಾವಣೆ ಎದುರಿಸಲು ಎನ್​ಡಿಎ ಸಿದ್ಧತೆ ನಡೆಸುತ್ತಿದೆ. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ನಾವು ಸಾಧಿಸಬೇಕಾಗಿದೆ ಎಂದು ಬುಧವಾರ ಅವರು ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ವಿಶ್ವ ದರ್ಜೆಯ ಸಮಾವೇಶ ಕೇಂದ್ರ 'ಭಾರತ ಮಂಟಪ'ವನ್ನು ಉದ್ಘಾಟಿಸಿದ ನಂತರ ಹೇಳಿದರು.

ಪ್ರಗತಿ ಮೈದಾನದಲ್ಲಿ ಪುನರಾಭಿವೃದ್ಧಿಗೊಂಡ ಅಂತರರಾಷ್ಟ್ರೀಯ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ ಕಾಂಪ್ಲೆಕ್ಸ್ (ಐಇಸಿಸಿ) 'ಭಾರತ್ ಮಂಟಪ'ವನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಭಾರತೀಯರು ತಮ್ಮ ಪ್ರಜಾಪ್ರಭುತ್ವಕ್ಕೆ ನೀಡಿದ ಸುಂದರ ಕೊಡುಗೆ ಎಂದು ಬಣ್ಣಿಸಿದರು.

ಬಳಿಕ, ನೀತಿ ಆಯೋಗದ ವರದಿಯನ್ನು ಉಲ್ಲೇಖಿಸಿದ ಅವರು, 13.5 ಕೋಟಿ ಬಡವರನ್ನು ಮೇಲೆತ್ತುವ ಮೂಲಕ ಭಾರತವು ಖಂಡಿತ ಬಡತನವನ್ನು ತೊಡೆದುಹಾಕಲಿದೆ. ತಮ್ಮ ಒಂಬತ್ತು ವರ್ಷಗಳ ಅವಧಿಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ, ರೈಲು ಮಾರ್ಗಗಳ ವಿದ್ಯುದೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಅಂಕಿಅಂಶಗಳನ್ನು ನೀಡಿದ ಪ್ರಧಾನಿ, 2014 ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಭಾರತವು 10ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಹೇಳಿದರು. ಯುಎಸ್, ಚೀನಾ, ಜರ್ಮನಿ ಮತ್ತು ಜಪಾನ್ ನಂತರ ದೇಶವು ಈಗ ವಿಶ್ವದಲ್ಲಿ ಐದನೇ ಸ್ಥಾನದಲ್ಲಿದೆ.

ಇದನ್ನೂ ಓದಿ :ಭವ್ಯ ಮಂದಿರದಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ: ಪ್ರಧಾನಿ ಮೋದಿಗೆ ಪತ್ರ ಮುಖೇನ ಆಹ್ವಾನಿಸಿ, ಒಪ್ಪಿಗೆಗಾಗಿ ಕಾದ ಶ್ರೀರಾಮ ಟ್ರಸ್ಟ್

ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, "ಭಾರತ ಮಂಟಪವು ದೇಶದ ಸಾಮರ್ಥ್ಯ, ಭಾರತದ ಹೊಸ ಶಕ್ತಿಯ ಕರೆಯಾಗಿದೆ, ಇದು ನಮ್ಮ ಭವ್ಯತೆಯನ್ನು ಸಾರಲಿದೆ. ನಕಾರಾತ್ಮಕ ಮನಸ್ಸಿನ ಜನರು ಈ ಯೋಜನೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದರು. ಆದರೆ ಇಂದು 'ಭಾರತ್ ಮಂಟಪ'ವನ್ನು ನೋಡಿದಾಗ ಪ್ರತಿಯೊಬ್ಬ ಭಾರತೀಯನಿಗೂ ಸಂತೋಷದ ಜೊತೆ ಹೆಮ್ಮೆ ಉಂಟಾಗುತ್ತದೆ ಎಂದರು.

ಕೆಲವು ವಾರಗಳ ನಂತರ ಜಿ-20ಗೆ ಸಂಬಂಧಿಸಿದ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ ಮತ್ತು ವಿಶ್ವದ ಪ್ರಮುಖ ರಾಷ್ಟ್ರಗಳ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ. ಈ ಭವ್ಯ ಭಾರತ ಮಂಟಪದಿಂದ ದೇಶದ ಬೆಳವಣಿಗೆಯನ್ನು ಇಡೀ ಜಗತ್ತು ನೋಡುತ್ತದೆ, ಜಾಗತಿಕ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳ ಸರಣಿ ನಿರಂತರವಾಗಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ರಾಜಧಾನಿ ದೆಹಲಿಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಕನ್ವೆನ್ಷನ್ ಸೆಂಟರ್ ಹೊಂದುವುದು ಬಹಳ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ :ಭಯೋತ್ಪಾದನಾ ಸಂಘಟನೆಗಳಲ್ಲಿಯೂ ಇದೇ ಇಂಡಿಯಾ ಎಂಬ ಹೆಸರು ಇದೆ.. ಪ್ರತಿಪಕ್ಷದ ಮೈತ್ರಿಕೂಟಕ್ಕೆ ಪ್ರಧಾನಿ ಮೋದಿ ತಿರುಗೇಟು

ABOUT THE AUTHOR

...view details