ಕರ್ನಾಟಕ

karnataka

By

Published : Mar 12, 2022, 10:40 PM IST

ETV Bharat / bharat

ರಜೆಯ ಮೇಲೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ರಜೆಯ ಮೇಲೆ ಮನೆಗೆ ತೆರಳಿದ್ದ ಯೋಧನನ್ನ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್​​ನಲ್ಲಿ ನಡೆದಿದೆ.

CRPF personnel shot dead by suspected militants
CRPF personnel shot dead by suspected militants

ಶ್ರೀನಗರ(ಜಮ್ಮು-ಕಾಶ್ಮೀರ):ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧನೋರ್ವ ರಜೆಯ ಮೇಲೆ ಮನೆಗೆ ಬಂದಿದ್ದ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್​​​ನಲ್ಲಿ ಈ ಘಟನೆ ನಡೆದಿದೆ.

ಸಿಆರ್​​ಪಿಎಫ್​​ನಲ್ಲಿ ಯೋಧನಾಗಿದ್ದ ಮುಖ್ತಾರ್​ ಅಹ್ಮದ್​​​ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ತಕ್ಷಣವೇ ಯೋಧನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಹುತಾತ್ಮರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.

ಕಳೆದ ಎರಡು ದಿನಗಳಿಂದ ಕಣಿವೆ ನಾಡಿನಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದ್ದು, ಇಬ್ಬರು ಸರಪಂಚ್​ರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಶನಿವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿ ಮತ್ತೋರ್ವ ಸರಪಂಚ್​ನನ್ನ ಗಾಯಗೊಳಿಸಿರುವ ಉಗ್ರರು, ಇದೀಗ ಯೋಧನ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿರಿ:ಪಂಚರಾಜ್ಯ ಸೋಲು: ಸೋನಿಯಾ, ಪ್ರಿಯಾಂಕಾ, ರಾಹುಲ್ ರಾಜೀನಾಮೆ ಸುದ್ದಿ ಅಲ್ಲಗಳೆದ ಕಾಂಗ್ರೆಸ್​​

ಕಳೆದ ವರ್ಷ ಜುಲೈ ತಿಂಗಳಲ್ಲೂ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ CRPF ಯೋಧನ ಮನೆಯೊಳಗೆ ನುಗ್ಗಿದ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ವೇಳೆ ಕೂಡ ಯೋಧ ರಜೆಯ ಮೇಲೆ ಮನೆಗೆ ಬಂದಿದ್ದನು.

ABOUT THE AUTHOR

...view details