ಕರ್ನಾಟಕ

karnataka

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯ

By

Published : Apr 19, 2022, 4:14 PM IST

ರಾಷ್ಟ್ರ ರಾಜಧಾನಿಯಲ್ಲಿ ಹನುಮ ಜಯಂತಿಯ ದಿನ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

Yogi Adityanath Order On Religious Processions
Yogi Adityanath Order On Religious Processions

ಲಖನೌ(ಉತ್ತರ ಪ್ರದೇಶ): ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಜಹಾಂಗಿರ್​ಪುರಿಯಲ್ಲಿ ನಡೆದ ಭೀಕರ ಹಿಂಸಾಚಾರ ಅನೇಕ ವಿವಾದಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಎಚ್ಚೆತ್ತುಕೊಂಡಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವಿಚಾರವಾಗಿ ಪ್ರಮುಖ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಯಾವುದೇ ರೀತಿಯ ಧಾರ್ಮಿಕ ಮೆರವಣಿಗೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿಎಂ, ಸರ್ಕಾರದ ಅನುಮತಿ ಇಲ್ಲದೇ ಯಾವುದೇ ರೀತಿಯ ಮೆರವಣಿಗೆ, ಶೋಭಾಯಾತ್ರೆ ನಡೆಸುವಂತಿಲ್ಲ. ಅನುಮತಿ ನೀಡುವ ಮೊದಲು ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಬಗ್ಗೆ ಸಂಘಟಕರಿಂದ ಅಫಿಡವಿಟ್​ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದು, ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪ್ರತಿಯೊಬ್ಬ ನಾಗರಿಕನ ಸುರಕ್ಷತೆ ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಹೊಸದಾಗಿ ಆಯೋಜನೆಗೊಳ್ಳುವ ಯಾವುದೇ ಕಾರ್ಯಕ್ರಮಗಳಿಗೆ ಇದೀಗ ಅನುಮತಿ ನೀಡಲು ಸಾಧ್ಯವಿಲ್ಲ. ಧಾರ್ಮಿಕ ಮೆರವಣಿಗೆ ಗೊತ್ತುಪಡಿಸಿದ ಸ್ಥಳ ಮತ್ತು ರಸ್ತೆಗಳ ಮೂಲಕ ಮಾತ್ರವೇ ಸಾಗಬೇಕು ಎಂದಿದ್ದಾರೆ.

ಇದನ್ನೂ ಓದಿ:ದಲಿತ ವಿದ್ಯಾರ್ಥಿಗೆ ಬೆಲ್ಟ್​, ಕೇಬಲ್​ನಿಂದ ಥಳಿಸಿ, ಕಾಲು ನೆಕ್ಕಿಸಿದರು! ವಿಡಿಯೋ

ಮುಂಬರುವ ದಿನಗಳಲ್ಲಿ ಅಕ್ಷಯ ತೃತೀಯ ಮತ್ತು ಈದ್‌ ಹಬ್ಬ ಒಂದೇ ದಿನ ಬರುವ ಕಾರಣ ಇದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ದೇಶನ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಸರ್ಕಾರಿ ರಜಾ ದಿನದಂದು ಎಲ್ಲ ಪೊಲೀಸ್ ಅಧಿಕಾರಿಗಳ ರಜೆ ರದ್ದು ಮಾಡಲಾಗಿದೆ.

ABOUT THE AUTHOR

...view details