ನವದೆಹಲಿ :ಜನತಾದಳ (ಯುನೈಟೆಡ್) ರಾಜ್ಯಸಭಾ ಸಂಸದ, 'ಕಿಂಗ್ ಮಹೇಂದ್ರ' ಎಂದೇ ಖ್ಯಾತರಾಗಿದ್ದ ಮಹೇಂದ್ರ ಪ್ರಸಾದ್(81) ನಿನ್ನೆ (ಭಾನುವಾರ) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೆಲ ಸಮಯದಿಂದ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ದೇಶದ ಫಾರ್ಮಾ ಉದ್ಯಮಿಗಳಲ್ಲಿ ಒಬ್ಬರಾದ ಮಹೇಂದ್ರ ಪ್ರಸಾದ್ ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು. 1980ರಲ್ಲಿ ಬಿಹಾರದ ಜೆಹಾನಾಬಾದ್ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಕಿಂಗ್ ಮಹೇಂದ್ರ ಸ್ಪರ್ಧಿಸಿ ಗೆದ್ದರು.
ಬಳಿಕ 1984ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತರು. ಆದಾಗ್ಯೂ 1985ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. 1985ರಿಂದ ಮಹೇಂದ್ರ ಪ್ರಸಾದ್ ಈವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.