ಕರ್ನಾಟಕ

karnataka

By

Published : Feb 8, 2022, 6:32 AM IST

ETV Bharat / bharat

ಹಿಜಾಬ್​ ವಿವಾದ: ರಾಜಕೀಯ ಪಕ್ಷಗಳಿಂದ 2023ರ ಚುನಾವಣೆಗೆ ಲಾಭ ಪಡೆದುಕೊಳ್ಳುವ ಉದ್ದೇಶ: ಮಾಜಿ ಪ್ರಧಾನಿ

ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಇದರ ಲಾಭ ಪಡೆದುಕೊಳ್ಳಲು ಮುಂದಾಗಿವೆ ಎಂದಿದ್ದಾರೆ.

HDD on Hijab issue
HDD on Hijab issue

ನವದೆಹಲಿ:ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್​ ವಿವಾದ ಈಗಾಗಲೇ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಈ ಪ್ರಕರಣ ಈಗಾಗಲೇ ಸಂಸತ್​​ನಲ್ಲೂ ಚರ್ಚೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೇಶದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್​ ಅಧಿವೇಶನದಲ್ಲಿ ಭಾಗಿಯಾಗಿರುವ ದೇವೇಗೌಡರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2023ರ ವಿಧಾನಸಭೆ ಚುನಾವಣೆಗೋಸ್ಕರ ಹಿಜಾಬ್​ ವಿವಾದವನ್ನ ವಿವಿಧ ರಾಜಕೀಯ ಪಕ್ಷಗಳು ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದಿದ್ದಾರೆ. ಈ ಪ್ರಕರಣದಲ್ಲಿ ಕೆಲವೊಂದು ದುಷ್ಟ ಹಿತಾಸಕ್ತಿಗಳ ಕೈವಾಡವಿದ್ದು, ವಿದ್ಯಾರ್ಥಿಗಳು ಹಾಗೂ ರಾಜಕೀಯ ಪಕ್ಷಗಳನ್ನ ತಪ್ಪು ದಾರಿಗೆ ತೆಗೆದುಕೊಂಡು ಹೋಗುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ:'ನನ್ನ ಕೊನೆ ಉಸಿರಿರುವವರೆಗೆ ಹಾವು ಹಿಡಿಯುವೆ': ಕೇರಳದ ಸ್ನೇಕ್​ ಮ್ಯಾನ್​​ ಸುರೇಶ್​

ಕರಾವಳಿಯಲ್ಲಿ ಕಾಣಿಸಿಕೊಂಡಿದ್ದ ಈ ವಿವಾದಕ್ಕೆ ಅಲ್ಲಿನ ರಾಜಕೀಯ ಸಂಘಟನೆವೊಂದು ವಿವಾದದ ಕಿಡಿ ಹೊತ್ತಿಸಿದ್ದು, ಇದೀಗ ವಿವಿಧ ಪಕ್ಷಗಳು ಇದರ ರಾಜಕೀಯ ಲಾಭ ಪಡೆದುಕೊಳ್ಳುತ್ತಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ವಿವಾದವನ್ನ ತಕ್ಷಣವೇ ಹತ್ತಿಕ್ಕಬೇಕು ಎಂದಿದ್ದಾರೆ.

ABOUT THE AUTHOR

...view details