ರಾಮಗಢ/ಜಾರ್ಖಂಡ್ :ಮನೆಗೆ ನುಗ್ಗಿ ಜಾರ್ಖಂಡ್ನ ರಾಮಗಢ ಜಿಲ್ಲೆಯ ಕಾಂಗ್ರೆಸ್ ನಾಯಕ ಕಮಲೇಶ್ ನಾರಾಯಣ್ ಶರ್ಮಾ(60) ಅವರನ್ನು ಕೊಲೆ ಮಾಡಲಾಗಿದೆ. ಹಾಗೂ ಅವರ ಪತ್ನಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಅಪರಿಚಿತರು ಭುರ್ಕುಂದ ಪೊಲೀಸ್ ಚೌಕಿಯ ಸೆಂಟ್ರಲ್ ಸೌಂಡಾ ಕಾಲೋನಿಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಮಲೇಶ್ ನಾರಾಯಣ್ ಶರ್ಮಾ ಅವರ ನಿವಾಸಕ್ಕೆ ಕಿಟಕಿಯ ಮೂಲಕ ಪ್ರವೇಶಿಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ ಮತ್ತು ಕಮಲೇಶ್ ಪತ್ನಿ ಚಂಚಲಾ ಶರ್ಮಾ ಅವರನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಅಂತಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.