ಕರ್ನಾಟಕ

karnataka

ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆ ಎಂಬುವುದು ಮಿಥ್ಯೆ: ಸಿಜೆಐ ಎನ್‌.ವಿ.ರಮಣ

By

Published : Dec 27, 2021, 7:57 AM IST

ಕೇಂದ್ರ ಕಾನೂನು ಸಚಿವಾಲಯ, ರಾಜ್ಯ ಸರ್ಕಾರಗಳು, ಗವರ್ನರ್, ಹೈಕೋರ್ಟ್ ಕೊಲಿಜಿಯಂ ಹಾಗು ಗುಪ್ತಚರ ವಿಭಾಗ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ನ್ಯಾಯಾಧೀಶರ ನೇಮಕ ಪ್ರಕ್ರಿಯೆಯಲ್ಲಿ ಭಾಗಿಯಾಗಿರುತ್ತಾರೆ- ಸಿಜೆಐ ಎನ್‌.ವಿ.ರಮಣ ಸ್ಪಷ್ಟನೆ

CJI Ramana
ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ

ಹೈದರಾಬಾದ್:ನ್ಯಾಯಾಧೀಶರೇ ನ್ಯಾಯಾಧೀಶರನ್ನು ನೇಮಿಸಿಕೊಳ್ಳುತ್ತಾರೆ ಎಂಬ ಹೇಳಿಕೆ ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ. ಅದು ಮಿಥ್ಯೆ. ಏಕೆಂದರೆ, ವಾಸ್ತವವಾಗಿ ನ್ಯಾಯಾಂಗ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಸ್ಪಷ್ಟಪಡಿಸಿದರು.

ಭಾನುವಾರ ವಿಜಯವಾಡದ ಸಿದ್ಧಾರ್ಥ ಕಾನೂನು ಕಾಲೇಜಿನಲ್ಲಿ "ಭಾರತೀಯ ನ್ಯಾಯಾಂಗ-ಭವಿಷ್ಯದ ಸವಾಲುಗಳು" ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆಗಳು ಹೆಚ್ಚುತ್ತಿವೆ. ಕೆಲವೊಮ್ಮೆ ಪಕ್ಷಗಳು ಅನುಕೂಲಕರ ಆದೇಶವನ್ನು ಪಡೆಯದಿದ್ದರೆ, ನ್ಯಾಯಾಧೀಶರ ವಿರುದ್ಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತ ಪ್ರಚಾರಗಳು ನಡೆಯುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೇರಳ ಸಂಸದ ಜಾನ್ ಬ್ರಿಟಾಸ್ ಅವರು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ (ವೇತನ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ, 2021ರ ಸಂಸತ್ತಿನಲ್ಲಿ ಚರ್ಚೆಯ ಸಂದರ್ಭದಲ್ಲಿ ನ್ಯಾಯಾಧೀಶರು ನ್ಯಾಯಾಧೀಶರನ್ನು ನೇಮಿಸುವುದು ಎಲ್ಲಿಯೂ ಗೊತ್ತಾಗುವುದಿಲ್ಲ ಎಂದು ಹೇಳಿದ್ದರು.

ಕೇಂದ್ರ ಕಾನೂನು ಸಚಿವಾಲಯ, ರಾಜ್ಯ ಸರ್ಕಾರಗಳು, ಗವರ್ನರ್, ಹೈಕೋರ್ಟ್ ಕೊಲಿಜಿಯಂ, ಗುಪ್ತಚರ ವಿಭಾಗ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ನ್ಯಾಯಾಧೀಶರ ನೇಮಕ ಪ್ರಕ್ರಿಯೆಯಲ್ಲಿ ಭಾಗಿಯಾಗಿರುತ್ತಾರೆ. ಅಂತಿಮವಾಗಿ, ಅಭ್ಯರ್ಥಿಯ ಅರ್ಹತೆಯನ್ನು ಪರೀಕ್ಷಿಸಿ ನೇಮಕ ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಗ್ಗೆ ಚೆನ್ನಾಗಿ ತಿಳುವಳಿಕೆಯುಳ್ಳವರು ಕೂಡ ಅಪ್ರಚಾರ ಮಾಡುತ್ತಾರೆ ಎಂದು ನ್ಯಾಯಮೂರ್ತಿ ರಮಣ ಬೇಸರ ವ್ಯಕ್ತಪಡಿಸಿದರು.

ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರಗಳ ಕರ್ತವ್ಯ. ಹೊಸ ಮಾಧ್ಯಮ ಉಪಕರಣಗಳು ಅಗಾಧವಾದ ವರ್ಧಿಸುವ ಸಾಮರ್ಥ್ಯವನ್ನು ಹೊಂದಿವೆ. ಆದರೆ ಇವು ಸರಿ ಮತ್ತು ತಪ್ಪುಗಳ ನಡುವಿನ ವ್ಯತ್ಯಾಸವನ್ನು ಗುರುತಿಸಲು ಅಸಮರ್ಥವಾಗಿವೆ. ಒಳ್ಳೆಯದು ಮತ್ತು ಕೆಟ್ಟದು ಮತ್ತು ನಿಜವಾದ ಮತ್ತು ನಕಲಿ ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾಧ್ಯಮ ಪ್ರಯೋಗಗಳು ಮಾರ್ಗದರ್ಶಿ ಅಂಶವಾಗುವುದಿಲ್ಲ ಎಂದು ಅವರು ಹೇಳಿದರು.

ಐತಿಹಾಸಿಕವಾಗಿ, ಭಾರತದಲ್ಲಿ ಪ್ರಾಸಿಕ್ಯೂಟರ್‌ಗಳು ಸರ್ಕಾರದ ನಿಯಂತ್ರಣದಲ್ಲಿದ್ದಾರೆ. ಆದ್ದರಿಂದ ಅವರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸದಿರುವುದು ಅಚ್ಚರಿಯೇನಲ್ಲ ಎಂದು ಎನ್.ವಿ.ರಮಣ ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಸಿಕ್ಕೀಂನಲ್ಲಿ ಹಿಮಪಾತ: ಸಾವಿರಕ್ಕೂ ಹೆಚ್ಚು ಪ್ರವಾಸಿಗರ ರಕ್ಷಿಸಿದ ಭಾರತೀಯ ಸೇನೆ

ABOUT THE AUTHOR

...view details