ಬೆಂಗಳೂರು:2020-21ನೇ ಸಾಲಿನ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದರು.
ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶಗಳ ಆಧಾರದ ಮೇಲೆ ಈ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಮಾಡುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗಿತ್ತು. ಇದೇ ವೇಳೆ ಫಲಿತಾಂಶದಿಂದ ಅಸಮಾಧಾನವಾಗಿದ್ದರೆ, ಆಗಸ್ಟ್ನಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಒಟ್ಟು 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರ ಪೈಕಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ಇದ್ದಾರೆ. ಪ್ರಮುಖವಾಗಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,243 ಇದರಲ್ಲಿ 14,243 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸ್
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು https://dpue-exam.karnataka.gov.in/iipu2021 registration number/regnumber ಈ ಲಿಂಕ್ನ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ ಸ್ಟೂಡೆಂಟ್ಸ್: 4,50,706