ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದ ವಿವಿಧೆಡೆ ಕಳ್ಳತನ: ಕರ್ನಾಟಕದ ಐವರು ಆರೋಪಿಗಳ ಬಂಧನ - ಈಟಿವಿ ಭಾರತ ಕನ್ನಡ

ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಕರ್ನಾಟಕದ ಐವರು ಆರೋಪಿಗಳನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಮೂಲದ ಐವರು ಆರೋಪಿಗಳ ಬಂಧನ
ಕರ್ನಾಟಕ ಮೂಲದ ಐವರು ಆರೋಪಿಗಳ ಬಂಧನ

By

Published : Mar 30, 2023, 12:01 PM IST

ಜಲೌನ್ (ಉತ್ತರ ಪ್ರದೇಶ)​:ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಲಕ್ನೋದ ಕೊತ್ವಾಲಿ ಪೊಲೀಸರು ಬಂಧಿಸಿದ್ದಾರೆ. ಸ್ಪೆಷಲ್ ಆಪರೇಷನ್ ಗ್ರೂಪ್ ಎಸ್‌ಒಜಿ ಮತ್ತು ಕೊತ್ವಾಲಿ ಪೊಲೀಸ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕನ್ನಡ ಜಿಲ್ಲೆಯ ಆರೀಫ್, ಮೊಹಮ್ಮದ್ ಗೌಸ್, ಅನೀಸ್ ಶೇಖ್, ಆಸಿಫ್ ಶೇಖ್ ಮತ್ತು ಅರ್ಸ್ಲಾನ್​ ಎಂಬವರನ್ನು ಸೆರೆ ಹಿಡಿದಿದ್ದಾರೆ. ಆರೋಪಿತರಿಂದ ಲಕ್ನೋ ನೋಂದಣಿಯ ಒಂದು ಹೋಂಡಾ ಸಿಟಿ ಕಾರು, 1.55 ಲಕ್ಷ ರೂಪಾಯಿ ಹಾಗೂ ಎರಡು ಪಿಸ್ತೂಲ್‌ಗಳ ಜೊತೆಗೆ ಕಾಟ್ರಿಡ್ಜ್‌ಗಳನ್ನು ಜಪ್ತಿ ಮಾಡಲಾಗಿದೆ.

ಪ್ರಕರಣದ ಬಗ್ಗೆ ಪೊಲೀಸ್​ ಅಧಿಕಾರಿ ಗಿರ್ಜಾ ಶಂಕರ್​ ತ್ರಿಪಾಠಿ ಮಾಹಿತಿ ನೀಡಿದರು. ಆರೋಪಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಪಡೆದು ಕಾರಿನಲ್ಲಿ ತೆರಳುತ್ತಿದ್ದಾಗ ಐವರನ್ನು ತಡೆಯಲು ಪೊಲೀಸರು ಯತ್ನಿಸಿದ್ದು, ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರೂ ದಾಳಿ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳು ಸೇರಿ ಐವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಒಬ್ಬ ಪೊಲೀಸ್​ ಪೇದೆಯೂ ಗಾಯಗೊಂಡಿದ್ದಾರೆ.

ಆರೋಪಿಗಳು ಕೃತ್ಯ ಎಸಗಿದ ನಂತರ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪಲಾಯಣ ಮಾಡಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು. ಪ್ರಕರಣದಲ್ಲಿ ಇನ್ನಿಬ್ಬರ ಹೆಸರನ್ನು ಆರೋಪಿಗಳು ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ. ಅವರನ್ನು ಬಂಧಿಸಲು ಮತ್ತೆ ಎರಡು ಪೊಲೀಸ್​ ತಂಡಗಳನ್ನು ನಿಯೋಜಿಸಲಾಗಿದೆ. ಆರೋಪಿಗಳು ಬಾರಾಬಂಕಿ ಜಿಲ್ಲೆಯ ಪ್ರದೇಶವೊಂದರಲ್ಲಿ ವಾಸಿಸುತ್ತಿದ್ದರು. ಗಾಯಾಳು ಪೊಲೀಸ್​ ಪೇದೆ ಮತ್ತು ಇಬ್ಬರು ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಎಸ್​ಐ ಪಿಸ್ತೂಲ್​ ಕದ್ದು, ಪೊಲೀಸರ ಮೇಲೆಯೇ ಗುಂಡು ಹಾರಿಸಿದ ವ್ಯಕ್ತಿ: ವಿಡಿಯೋ ನೋಡಿ

ಕೆಲವು ದಿನಗಳ ಹಿಂದೆ ನವದೆಹಲಿಯಲ್ಲಿ ನಡೆದ ಪ್ರಕರಣವೊಂದರಲ್ಲಿ, ಪತ್ನಿಯಿಂದ ದೂರವಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬ ಶಸ್ತ್ರಾಸ್ತ್ರಗಳ ಸಮೇತ ಸಾರ್ವಜನಿಕವಾಗಿ ಓಡಾಡುತ್ತಿದ್ದಾಗ, ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಈತ ರಸ್ತೆ ಮೇಲೆ ಚಾಕು ಹಿಡಿದು ಓಡಾಡುತ್ತಿದ್ದುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮೇಲೆ ದಾಳಿ ಮಾಡಿ ಅವರ ಪಿಸ್ತೂಲ್​ ಕಸಿದುಕೊಂಡಿದ್ದ.

ಇದನ್ನೂ ಓದಿ:ಸಾಕ್ಷಿ ಹೇಳಲು ಬಂದ ಯುವಕನ ಮೇಲೆ ಜಮ್‌ಶೆಡ್‌ಪುರ ಕೋರ್ಟ್​ ಆವರಣದಲ್ಲಿ ಗುಂಡಿನ ದಾಳಿ

ರಸ್ತೆಯಲ್ಲಿ ಓಡಾಡುತ್ತಾ ಮನಬಂದಂತೆ ಗುಂಡು ಹಾರಿಸಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ವ್ಯಕ್ತಿಯನ್ನು ಹಿಡಿದು ಆಸ್ಪತ್ರೆ ಸೇರಿಸಿದ್ದರು. ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿತ್ತು. ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದವು. ಪೊಲೀಸರು ಕೊಲೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ:ಕೇಬಲ್​, ವೈಫೈ ಕಚೇರಿಯಲ್ಲಿ ಗುಂಡಿನ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ABOUT THE AUTHOR

...view details