ಚೆನ್ನೈ(ತಮಿಳುನಾಡು):ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕ - ತಮಿಳುನಾಡಿನ ಮಧ್ಯೆ ಮುಸುಕಿನ ಗುದ್ದಾಟ ಮುಂದುವರೆದಿದ್ದು, ಇದೀಗ ಉಭಯ ರಾಜ್ಯದ ಬಿಜೆಪಿ ಘಟಕಗಳ ನಡುವೆ ಮಾತಿನ ಸಮರ ಜೋರಾಗಿ ನಡೆಯುತ್ತಿದೆ. ಇದೇ ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಇಂದು ಕೂಡ ಹೇಳಿಕೆ ನೀಡಿದ್ದಾರೆ.
ವರದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ, 1956ರ ಕಾಯ್ದೆ ಪ್ರಕಾರ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಕೈಗೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಖಂಡಿತವಾಗಿ ಅನುಮತಿ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸಂಸತ್ ಸದಸ್ಯ ದಯಾನಿಧಿ ಮಾರನ್ ಕೂಡ ಮಾಹಿತಿ ತಿಳಿದುಕೊಂಡು ಮಾತನಾಡಲಿ ಎಂದಿದ್ದಾರೆ.