ಕರ್ನಾಟಕ

karnataka

ETV Bharat / bharat

ಕಾಶ್ಮೀರಿ ಪಂಡಿತ್​ ಹತ್ಯೆ ಪ್ರಕರಣ: ಪುಲ್ವಾಮಾ ಗ್ರಾಮದಲ್ಲಿ ಎಸ್‌ಐಎ ದಾಳಿ - ಎಸ್‌ಐಎ ದಾಳಿ

ಫೆಬ್ರವರಿ 26 ರಂದು ಪುಲ್ವಾಮಾದ ಈ ಸ್ಥಳೀಯ ಗ್ರಾಮದಲ್ಲಿ ಶಂಕಿತ ಉಗ್ರರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ಕಾಶ್ಮೀರಿ ಪಂಡಿತರಾದ ಸಂಜಯ್ ಶರ್ಮಾ ಅವರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಎ ಅಚಾನ್‌ನಲ್ಲಿ ದಾಳಿ ನಡೆಸಿದೆ.

Kashmiri Pandit killing
ಕಾಶ್ಮೀರಿ ಪಂಡಿತ್ ಹತ್ಯೆ

By

Published : Mar 29, 2023, 8:43 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಕಳೆದ ತಿಂಗಳು ಕಾಶ್ಮೀರ ಪಂಡಿತರೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ(ಎಸ್‌ಐಎ) ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾದ ಅಚಾನ್ ಗ್ರಾಮದಲ್ಲಿ ದಾಳಿ ನಡೆಸಿದೆ.

ಸ್ಥಳೀಯ ಪೊಲೀಸರು- ಸಿಆರ್‌ಪಿಎಫ್‌ ನೆರವಿನೊಂದಿಗೆ ಎಸ್‌ಐಎ ದಾಳಿ:ಫೆಬ್ರವರಿ 26 ರಂದು ಪುಲ್ವಾಮಾದ ಈ ಸ್ಥಳೀಯ ಹಳ್ಳಿ ಅಚಾನ್‌ನಲ್ಲಿ ಶಂಕಿತ ಉಗ್ರಗಾಮಿಗಳು ಕಾಶ್ಮೀರಿ ಪಂಡಿತರಾದ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಈ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂಸ್ಥೆಯು ಅಚಾನ್‌ನಲ್ಲಿ ದಾಳಿ ನಡೆಸಿದೆ ಎಂದು ಎಸ್‌ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ನೆರವಿನೊಂದಿಗೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಸಂಜಯ್ ಶರ್ಮಾ ಎದೆಗೆ ಬಿದ್ದಿದ್ದವು ಮೂರು ಗುಂಡು:ಸಂಜಯ್ ಶರ್ಮಾ (40) ಬ್ಯಾಂಕ್ ಎಟಿಎಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಡಿಎಸ್ಪಿ ಶ್ರೇಣಿಯ ಅಧಿಕಾರಿ ನೇತೃತ್ವದ ಎಸ್‌ಐಎ ತಂಡವು ಸ್ಥಳಕ್ಕೆ ಆಗಮಿಸಿ ದಾಳಿಕೋರರು ಪರಾರಿಯಾಗಿರುವ ಬಗ್ಗೆ ಮತ್ತು ಸ್ಥಳೀಯ ಜನರಿಂದ ಪ್ರಕರಣದ ವಿವಿಧ ಅಂಶಗಳ ಬಗ್ಗೆ ಮಾಹಿತಿ ಪಡೆದರು. ಶರ್ಮಾ ಅವರ ಎದೆಗೆ ಮೂರು ಗುಂಡುಗಳು ತಗುಲಿದ್ದವು. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಇದನ್ನೂ ಓದಿ:ಮುಂಬೈ: ಸಚಿವಾಲಯದ ಮುಂದೆ ಇಬ್ಬರು ಮಹಿಳೆಯರು, ಓರ್ವ ದಿವ್ಯಾಂಗ ವ್ಯಕ್ತಿಯಿಂದ ಆತ್ಮಹತ್ಯೆ ಯತ್ನ

ಕೊಲೆಯಾದ ಪಂಡಿತ್‌ಗೆ ನ್ಯಾಯ ಒದಗಿಸುವಂತೆ ಸ್ಥಳೀಯರ ಒತ್ತಾಯ: ಸಂಜಯ್ ಶರ್ಮಾ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಅಚಾನ್ ಶಾಖೆಯ ಎಟಿಎಂನಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಪರಿಸ್ಥಿತಿ ಹದಗೆಟ್ಟ ನಂತರ, ಬ್ಯಾಂಕ್ ಅವರಿಗೆ ಮಾಸಿಕ ಸಂಬಳ ನೀಡಲಾಗಿತ್ತು. ಕೆಲಸಕ್ಕೆ ಬರುವುದನ್ನು ನಿಲ್ಲಿಸುವಂತೆ ಪೊಲೀಸರು ಅವರಿಗೆ ತಿಳಿಸಿದ್ದರು. ಈ ದುರ್ಘಟನೆಯ ನಂತರ, ಗ್ರಾಮದ ಸ್ಥಳೀಯರು ಪ್ರತಿಭಟನೆ ಕೈಗೊಂಡಿದ್ದರು. ಕೊಲೆಯಾದ ಪಂಡಿತ್‌ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ:ಆಹಾರದಲ್ಲಿ ಅಮಲೇರುವ ಪದಾರ್ಥ ಬೆರೆಸಿ ಪೋಷಕರನ್ನು ಕೊಡಲಿಯಿಂದ ಕೊಂದ ಬಾಲಕಿ!

ಈ ಹಿಂದೆಯೂ ನಡೆದಿತ್ತು ಕಾಶ್ಮೀರಿ ಪಂಡಿತರ ಹತ್ಯೆ: ಅನಂತನಾಗ್ ಜಿಲ್ಲೆಯ ಮಸೀದಿಯೊಂದರ ಹೊರಗೆ ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ವ್ಯಕ್ತಿ ಆಸಿಫ್ ಗನೈ ಗಾಯಗೊಂಡ ಕೆಲವು ದಿನಗಳ ನಂತರ ಈ ದಾಳಿ ನಡೆದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿಯಿಂದ ಬದುಕುಳಿದಿದ್ದಾರೆ. ಕಳೆದ ವರ್ಷ ನಡೆದ ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಸುಮಾರು ಆರು ಕಾಶ್ಮೀರಿ ಪಂಡಿತರು ಸಾವನ್ನಪ್ಪಿದ್ದರು. ಅಕ್ಟೋಬರ್ 2022ರಲ್ಲಿ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಣ್ಣಿನ ತೋಟಕ್ಕೆ ಹೋಗುತ್ತಿದ್ದ ಕಾಶ್ಮೀರಿ ಪಂಡಿತರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.

ಇದನ್ನೂ ಓದಿ:4 ಮುದ್ದಾದ ಚೀತಾ ಮರಿಗಳಿಗೆ ಜನ್ಮ ನೀಡಿದ 'ಸಿಯಾಯಾ': ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಂಭ್ರಮ

ಇದನ್ನೂ ಓದಿ:ಗೂಗಲ್​ಗೆ 1,337.76 ಕೋಟಿ ರೂ. ದಂಡ.. ಆದೇಶ ಎತ್ತಿಹಿಡಿದ ಎನ್‌ಸಿಎಲ್‌ಎಟಿ​

ABOUT THE AUTHOR

...view details