ತಿರುವನಂತಪುರಂ(ಕೇರಳ):ನೈತಿಕ ಪೊಲೀಸ್ಗಿರಿ ನಡೆಸಿದ ಸ್ಥಳೀಯರ ವಿರುದ್ಧ ಕೇರಳ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಈ ಮೂಲಕ ಅವರಿಗೆ ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ. ಕಾಲೇಜ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಸ್ ಸ್ಟ್ಯಾಂಡ್ನಲ್ಲಿ ಒಟ್ಟಿಗೆ ಕುಳಿತುಕೊಳ್ಳುತ್ತಿದ್ದರು. ಇದರಿಂದ ಸ್ಥಳೀಯರು ಬಸ್ ತಂಗುದಾಣದ ಬೆಂಚ್ ತುಂಡರಿಸಿ ಮೂರು ಭಾಗ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಬೆಂಚ್ಗಳ ಮೇಲೆ ಒಬ್ಬರ ಮೇಲೆ ಒಬ್ಬರು ಕೂತು ವಿನೂತನವಾಗಿ ಪ್ರತಿಭಟಿಸಿದರು. ಈ ಮೂಲಕ ನೈತಿಕ ಪೊಲೀಸ್ಗಿರಿಗೆ ತಕ್ಕ ಉತ್ತರ ನೀಡಿದ್ದಾರೆ.
ಕಾಲೇಜ್ ಆವರಣದ ಹೊರಗಿರುವ ಬಸ್ ತಂಗುದಾಣದಲ್ಲಿ ವಿದ್ಯಾರ್ಥಿಗಳು ಪರಸ್ಪರ ಮಾತನಾಡುತ್ತ ಕೂರುತ್ತಿದ್ದರು. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಒಟ್ಟಿಗೆ ಕೂರಬಾರದು ಎಂಬ ಕಾರಣಕ್ಕೆ ತಂಗುದಾಣದ ಬೆಂಚ್ ಕತ್ತರಿಸಿದ್ದರು. ರೆಸಿಡೆನ್ಶಿಯಲ್ ಅಸೋಸಿಯೇಶನ್ ಅಧ್ಯಕ್ಷ ಹಾಗೂ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಚೆರುವಕ್ಕಲ್ ಜಯನ್ ನೇತೃತ್ವದ ಸದಸ್ಯರು ಈ ರೀತಿಯಾಗಿ ನಡೆದುಕೊಳ್ಳುವ ಮೂಲಕ ನೈತಿಕ ಪೊಲೀಸ್ಗಿರಿ ಮಾಡಿದ್ದರು. ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪ ಸಹ ಮಾಡಿದ್ದರು.