ಕರ್ನಾಟಕ

karnataka

ETV Bharat / bharat

ಶಬರಿಮಲೆಗೆ ಜು.17ರಿಂದ ಭಕ್ತರಿಗೆ ಅವಕಾಶ... ಕೋವಿಡ್​ ಟೆಸ್ಟ್, ವ್ಯಾಕ್ಸಿನ್​​​ ಕಡ್ಡಾಯ - ಕೇರಳ ಶಬರಿಮಲೆ ದೇಗುಲ ಓಪನ್​

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು 48 ಗಂಟೆಗೂ ಮೊದಲು ಮಾಡಿದ ಆರ್​ಟಿ-ಪಿಸಿಆರ್​ ಪರೀಕ್ಷೆಯನ್ನೊಳಗೊಂಡ ಕೋವಿಡ್​ ನೆಗೆಟಿವ್ ಪ್ರಮಾಣ ಪತ್ರ ತರಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

Sabarimala temple
Sabarimala temple

By

Published : Jul 10, 2021, 7:58 PM IST

ತಿರುವನತಪುರಂ(ಕೇರಳ):2ನೇ ಹಂತದ ಕೋವಿಡ್​ ಅಲೆ ಕಡಿಮೆಯಾಗುತ್ತಿದ್ದು, ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. ಕೆಲವೊಂದು ರಾಜ್ಯಗಳಲ್ಲಿ ಸಂಪೂರ್ಣವಾಗಿ ಲಾಕ್​ಡೌನ್​ ತೆಗೆದುಹಾಕಲಾಗಿದ್ದು, ದೇವಸ್ಥಾನಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಕೇರಳದಲ್ಲೂ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಭೇಟಿಗೆ ಇದೀಗ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದ್ದು, ಜುಲೈ 17ರಿಂದ 21ರವರೆಗೆ ತೆರಳಬಹುದಾಗಿದೆ. ತಿಂಗಳ ಪೂಜೆಗೋಸ್ಕರ ಈ ಅವಕಾಶ ಮಾಡಿಕೊಡಲಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ (ಟಿಡಿಬಿ) ಮಾಹಿತಿ ಹಂಚಿಕೊಂಡಿದೆ.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್​ ವ್ಯಾಕ್ಸಿನ್​ ಪಡೆದುಕೊಂಡಿರುವ ಪ್ರಮಾಣ ಪತ್ರ ಹಾಗೂ ಆರ್​​ಟಿ-ಪಿಸಿಆರ್​​ ನೆಗೆಟಿವ್​ ರಿಪೋರ್ಟ್​ ಕಡ್ಡಾಯವಾಗಿ ಹೊಂದಿರಬೇಕು ಎಂದಿದೆ. RTPCR ರಿಪೋರ್ಟ್​ 48 ಗಂಟೆಯೊಳಗೆ ಮಾಡಿಸಿದ್ದಾಗಿರಬೇಕು ಎಂದು ತಿಳಿಸಲಾಗಿದೆ. ಪ್ರತಿದಿನ 5 ಸಾವಿರ ಭಕ್ತರು ಇಲ್ಲಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಆನ್​ಲೈನ್​ ಬುಕ್ಕಿಂಗ್​ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿರಿ: ಭಯೋತ್ಪಾದಕರಿಗೆ ಆರ್ಥಿಕ ನೆರವು: ಕಾಶ್ಮೀರದ 11 ಸರ್ಕಾರಿ ನೌಕರರ ವಜಾ

ಕೇರಳದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದ ಕಾರಣ ಕಳೆದ ಕೆಲ ತಿಂಗಳಿಂದ ಅಯ್ಯಪ್ಪನ ದೇವಸ್ಥಾನ ಸಂಪೂರ್ಣವಾಗಿ ಬಂದ್​ ಆಗಿದ್ದು, ಅಲ್ಲಿನ ಅರ್ಚಕರು ಪೂಜೆ ನಡೆಸುತ್ತಿದ್ದಾರೆ. ಇದೀಗ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕೊರೊನಾ ಹಾವಳಿ ಕಡಿಮೆಯಾಗಿದ್ದ ಸಂದರ್ಭದಲ್ಲೂ ಇದೇ ರೀತಿಯ ಅವಕಾಶ ನೀಡಲಾಗಿತ್ತು. ಆದರೆ 2ನೇ ಹಂತದ ಕೋವಿಡ್​ ಅಲೆ ದಿಢೀರ್​ ಆಗಿ ಹೆಚ್ಚಾಗುತ್ತಿದ್ದಂತೆ ದೇವಸ್ಥಾನ ಬಂದ್​ ಮಾಡಲಾಗಿತ್ತು.

ABOUT THE AUTHOR

...view details