ಲಖನೌ (ಉತ್ತರ ಪ್ರದೇಶ):ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣ ಮತ್ತಷ್ಟು ಮಹತ್ವದ ಘಟ್ಟಕ್ಕೆ ತಲುಪಿದೆ. ಇಲ್ಲಿನ ಮಸೀದಿಯನ್ನು ತೆರವು ಮಾಡಬೇಕೆಂದು ಒತ್ತಾಯಿಸಿ ದಾಖಲಾದ ಅರ್ಜಿಯ ವಿಚಾರಣೆಗೆ ಮಥುರಾ ನ್ಯಾಯಾಲಯ ಅನುಮತಿಸಿದೆ. ಇದರಿಂದಾಗಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುವ ನಿರೀಕ್ಷೆಯೂ ಇದೆ.
17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಹಿಂದೂ ಸಂಘಟನೆಗಳು ದಾಖಲಿಸಿರುವ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಈ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.