ಕರ್ನಾಟಕ

karnataka

By

Published : May 19, 2022, 1:57 PM IST

ETV Bharat / bharat

ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣ: ಮಸೀದಿ ತೆರವು ಮಾಡಬೇಕೆಂಬ ಅರ್ಜಿಗೆ ಕೋರ್ಟ್​ ಅಸ್ತು

ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣದ ವಿಷಯವಾಗಿ ಅರ್ಜಿ ದಾಖಲಿಸಿರುವ ಲಖನೌ ನಿವಾಸಿ ರಂಜನಾ ಅಗ್ನಿಹೋತ್ರಿ ಅರ್ಜಿ ಸಲ್ಲಿಸಿದ್ದು, ಮಸೀದಿಯನ್ನು ತೆರವು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಅರ್ಜಿಗೆ ಮಥುರಾ ನ್ಯಾಯಾಲಯ ಅನುಮತಿಸಿದೆ.

Krishna Janmabhoomi-Shahi Idgah case
ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣ

ಲಖನೌ (ಉತ್ತರ ಪ್ರದೇಶ):ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣ ಮತ್ತಷ್ಟು ಮಹತ್ವದ ಘಟ್ಟಕ್ಕೆ ತಲುಪಿದೆ. ಇಲ್ಲಿನ ಮಸೀದಿಯನ್ನು ತೆರವು ಮಾಡಬೇಕೆಂದು ಒತ್ತಾಯಿಸಿ ದಾಖಲಾದ ಅರ್ಜಿಯ ವಿಚಾರಣೆಗೆ ಮಥುರಾ ನ್ಯಾಯಾಲಯ ಅನುಮತಿಸಿದೆ. ಇದರಿಂದಾಗಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುವ ನಿರೀಕ್ಷೆಯೂ ಇದೆ.

17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಹಿಂದೂ ಸಂಘಟನೆಗಳು ದಾಖಲಿಸಿರುವ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಈ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಶ್ರೀಕೃಷ್ಣನ ಆರಾಧಕರಾದ ನಮಗೆ ದೇವರ ಆಸ್ತಿಯನ್ನು ಮರುಸ್ಥಾಪಿಸುವಂತೆ ಕೋರಿ ಮೊಕದ್ದಮೆ ಹೂಡುವ ಹಕ್ಕಿದೆ. ಕೃಷ್ಣ ಜನ್ಮಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಹಲವು ವರ್ಷಗಳ ಹಿಂದೆಯೇ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ, ಆ ರಾಜಿ ಕಾನೂನುಬಾಹಿರವಾಗಿದೆ ಎಂದು ಅರ್ಜಿದಾರರ ಪರ ವಕೀಲ ಗೋಪಾಲ್ ಖಂಡೇಲ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ:ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ಪ್ರಕರಣ: ಜುಲೈ 1 ರಿಂದ ವಿಚಾರಣೆ

ABOUT THE AUTHOR

...view details