ಕರ್ನಾಟಕ

karnataka

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

By

Published : Feb 10, 2022, 8:06 PM IST

ವಿಶೇಷ ತನಿಖಾ ತಂಡವು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ದೋಷಾರೋಪಣೆ ಹೊರಿಸಿದೆ.

ಆಶಿಶ್ ಮಿಶ್ರಾ
ಲಖಿಂಪುರ ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ

ಉತ್ತರ ಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಗುರುವಾರ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 3 ರಂದು ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿ ರೈತರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ನಾಲ್ವರು ರೈತರು, ಸ್ಥಳೀಯ ಪತ್ರಕರ್ತರು ಮತ್ತು ಇತರ ಮೂವರು ಸೇರಿದಂತೆ ಎಂಟು ಮಂದಿ ಈ ಘಟನೆಯಲ್ಲಿ ಸಾವನ್ನಪ್ಪಿದರು. ಈ ಪ್ರಕರಣದಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಮತ್ತು ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಸ್ಥಳೀಯ ರೈತರು ಪ್ರಮುಖ ಆರೋಪಿಗಳು ಎಂದು ಆರೋಪಿಸಿದ್ದಾರೆ. ಉತ್ತರ - ಮಧ್ಯ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಚಿವರ ಬೆಂಗಾವಲು ಪಡೆಯ ವಾಹನವು ರೈತರ ಮೇಲೆ ಹರಿದಿತ್ತು.

ವಿಶೇಷ ತನಿಖಾ ತಂಡವು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ದೋಷಾರೋಪಣೆ ಹೊರಿಸಿದೆ. ಈ ಪ್ರಕರಣವು ಪೂರ್ವ ಯೋಜಿತ ಪಿತೂರಿ, ಕೊಲ್ಲುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ನಡೆದ ಘಟನೆ ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಓದಿ:ಅಂತಿಮ ಆದೇಶ ಬರುವವರೆಗೂ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಬ್​ - ಕೇಸರಿ ಶಾಲು ಧರಿಸುವಂತಿಲ್ಲ - ಹೈಕೋರ್ಟ್​​

ABOUT THE AUTHOR

...view details