ನವದೆಹಲಿ:ಸ್ವರ ಸಾಮ್ರಾಟ ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿದ ಮಹೋನ್ನತ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ನೂರಾರು ಪ್ರಶಸ್ತಿಗಳನ್ನು ಒಲಿಸಿಕೊಂಡಿರುವ ಗಾನ ಗಾರುಡಿಗನಿಗೆ ಈಗ ದೇಶದ 2ನೇ ಅತ್ಯುನ್ನತ ಪ್ರಶಸ್ತಿ ಸಂದಿದೆ.
ಸ್ವರ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂಗೆ ಮರಣೋತ್ತರ ಪದ್ಮವಿಭೂಷಣ ಗೌರವ
ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ದೇಶದ ಎರಡನೇ ಅತಿದೊಡ್ಡ ನಾಗರಿಕ ಸೇವಾ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಮರಣೋತ್ತರವಾಗಿ ನೀಡಿ ಗೌರವ ಸಲ್ಲಿಸಿದೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ
ಎಸ್ಪಿಬಿ ಅವರು ವಿಶ್ವದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. ಮೂಲತ: ಆಂಧ್ರದವರಾದರೂ ಕರ್ನಾಟಕದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಅಷ್ಟೇ ಅಲ್ಲದೆ, ಕರ್ನಾಟಕವನ್ನೇ ತನ್ನ ತವರು ಎಂದು ಹೆಮ್ಮೆಯಿಂದ ಹೇಳುತ್ತಿದ್ದರು.
ಎಸ್.ಪಿ.ಬಿ ಅವರು ಕಳೆದ ಸೆಪ್ಟೆಂಬರ್ 25ರಂದು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.