ನವದೆಹಲಿ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಪ್ರತಿಧ್ವನಿಸಿತು. ಪ್ರಕರಣ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳು ಭಾರಿ ಕದ್ದಲ ಎಬ್ಬಿಸಿದವು. ಕಲಾಪ ತಹಬದಿಗೆ ಬಾರದ ಹಿನ್ನೆಯಲ್ಲಿ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಪ್ರಧಾನಿ ಮೋದಿ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳಲುತ್ತಿಲ್ಲ. ಎಸ್ಐಟಿ ವರದಿ ಆಧರಿಸಿ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಪ್ರಧಾನಿ ಮೋದಿ ಅವರು ಆರೋಪಿ ಸ್ಥಾನದಲ್ಲಿರುವ ಅಜಯ್ ಮಿಶ್ರಾ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.