ಕರ್ನಾಟಕ

karnataka

By

Published : Aug 20, 2023, 5:18 PM IST

Updated : Aug 20, 2023, 6:54 PM IST

ETV Bharat / bharat

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸರ್ಜರಿ: ಮೊಯ್ಲಿ, ಬಿಕೆ ಹರಿಪ್ರಸಾದ್​ಗೆ ಖಾಯಂ ಆಹ್ವಾನಿತ ಸದಸ್ಯ ಸ್ಥಾನ

CWC: ಅತ್ಯುನ್ನತ ನೀತಿ ನಿರ್ಧಾರ ತಳೆಯುವ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯನ್ನು ಪುನರ್​ ರಚಿಸಲಾಗಿದೆ. ಕರ್ನಾಟಕದ ಮೂವರು ಸೇರಿ 39 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸರ್ಜರಿ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸರ್ಜರಿ

ನವದೆಹಲಿ:ಮುಂಬರುವ ಪಂಚರಾಜ್ಯಗಳ ವಿಧಾನಸಭೆ, ಲೋಕಸಭೆ ಚುನಾವಣೆಗೆ ಭರ್ಜರಿ ತಾಲೀಮು ನಡೆಸುತ್ತಿರುವ ಕಾಂಗ್ರೆಸ್​, ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳ ಸಮಿತಿಯಾದ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯೂಸಿ) ಭರ್ಜರಿ ಸರ್ಜರಿ ಮಾಡಿದೆ. ರಾಜ್ಯದವರಾದ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಂಎಲ್​ಸಿ ಬಿಕೆ ಹರಿಪ್ರಸಾದ್​ ಅವರಿಗೆ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿ ಆದೇಶಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜಾಗುತ್ತಿರುವ ಕಾರಣ ರಣತಂತ್ರದ ಭಾಗವಾಗಿ 39 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.

ಶಶಿ ತರೂರ್​, ಆನಂದ್​ ಶರ್ಮಾಗೆ ಸ್ಥಾನ:ಇತ್ತ ರಾಷ್ಟ್ರೀಯವಾಗಿ ಗಮನ ಸೆಳೆದಿರುವ ಪಕ್ಷದ ಸಂಸದ ಶಶಿ ತರೂರ್ ಮತ್ತು ಆನಂದ್ ಶರ್ಮಾ ಅವರನ್ನು ಹೊಸ ಸಿಡಬ್ಲ್ಯೂಸಿಯಲ್ಲಿ ಸೇರಿಸಿಕೊಳ್ಳಲಾಗಿದೆ. ಕರ್ನಾಟಕದವರಾದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್​​ ಮತ್ತು ಮನೀಶ್ ತಿವಾರಿ ಅವರಿಗೆ ಖಾಯಂ ಆಹ್ವಾನಿತ ಸದಸ್ಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ಸಮಿತಿಯಲ್ಲಿ ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್, ಪಂಜಾಬ್‌ನ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಸೇರಿದಂತೆ 39 ಸದಸ್ಯರುಳ್ಳ ಸಮಿತಿಯನ್ನು ರಚಿಸಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸಲು ಹೊಸ ಸಿಡಬ್ಲ್ಯೂಸಿ ಸಮಿತಿಯನ್ನು ರಚಿಸಲು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿತ್ತು. ಎಐಸಿಸಿ ಅಧ್ಯಕ್ಷರೇ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಖರ್ಗೆ ಕಾಲ:ಮಲ್ಲಿಕಾರ್ಜುನ್​ ಖರ್ಗೆ ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಈಚೆಗೆ ನಡೆದ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಇದೇ ಯಶಸ್ಸನ್ನು ಮುಂದಿನ ಪಂಚರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮುಂದುವರಿಸಲು ಹೈಕಮಾಂಡ್​ ನಿರ್ಧರಿಸಿದೆ. ಖರ್ಗೆ ಅವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಶೀಘ್ರದಲ್ಲೇ ನಡೆಯುವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಪಕ್ಷವು ತಯಾರಿ ನಡೆಸುತ್ತಿದ್ದು, ಹೊಸ ಸಿಡಬ್ಲ್ಯುಸಿಯ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿದ್ದವು.

ಇದನ್ನೂ ಓದಿ:'ನಮ್ಮನ್ನು ಜಗ್ಗಬಾರದೆಂದು ಅವರನ್ನೇ ಜಗ್ಗಿದ್ದೇವೆ': ಆಪರೇಷನ್​ ಹಸ್ತ ಒಪ್ಪಿಕೊಂಡ ಸತೀಶ್​ ಜಾರಕಿಹೊಳಿ

Last Updated : Aug 20, 2023, 6:54 PM IST

ABOUT THE AUTHOR

...view details