ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿಂದೂಗಳಲ್ಲಿನ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳ ಕೋಟಾದಡಿ ಮುಸ್ಲಿಮರು ಪ್ರತಿನಿಧಿಸುವ ಮೂಲಕ ಮೀಸಲಾತಿ ಮತ್ತು ಪ್ರಾತಿನಿಧ್ಯದ ನ್ಯಾಯಯುತ ಪಾಲನ್ನು ನಿರಾಕರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಒಬಿಸಿ-ಎ ಕೋಟಾ ಅಡಿಯಲ್ಲಿ ಪಶ್ಚಿಮ ಬಂಗಾಳ ಪೊಲೀಸರಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಹಂಚಿಕೊಂಡ ಬಿಜೆಪಿ ಪಶ್ಚಿಮ ಬಂಗಾಳ ಸಹ-ಉಸ್ತುವಾರಿ ಅಮಿತ್ ಮಾಳವೀಯ “ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದವರ ಪಟ್ಟಿ ಇದು. ಮಮತಾ ಬ್ಯಾನರ್ಜಿ ಕೇವಲ ಜಾತಿಗಳ ಮೇಲೆ ಸಮತಾವಾದದ ನಂಬಿಕೆ ತುಂಡರಿಸಿಲ್ಲ, ಜೊತೆಗೆ ಒಬಿಸಿಗಳಿಗೆ ಮೀಸಲಾತಿ ಮತ್ತು ಪ್ರಾತಿನಿಧ್ಯದ ನ್ಯಾಯಯುತ ಪಾಲನ್ನು ನೀಡದೆ ಅವರ ಹಕ್ಕು ಕಸಿದಿದ್ದಾರೆ" ಎಂದು ದೂರಿದ್ದಾರೆ.