ಕೋಲ್ಕತ್ತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಹಿಂಸಾಚಾರ ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಪೊಲೀಸರನ್ನು ಅನೈತಿಕ ಕೃತ್ಯಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಗೆ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ. ಟಿಎಂಸಿ ಅಭ್ಯರ್ಥಿ ಮೇಲೆ ನಡೆದ ದಾಳಿಯ ಹಿಂದೆ ಅಮಿತ್ ಶಾ ಇದ್ದಾರೆ ಎಂದು ಆರೋಪಿಸಿದ್ದಾರೆ. ಅಂತಹ 'ಗೂಂಡಾ' (ದರೋಡೆಕೋರ), 'ದಂಗಬಾಜ್' (ದಂಗೆಕೋರ) ಗೃಹ ಸಚಿವರನ್ನು ನನ್ನ ಇಡೀ ಜೀವನದಲ್ಲಿ ನಾನು ನೋಡಿಲ್ಲ. ಅಮಿತ್ ಶಾ ಹುಲಿಗಿಂತ ಅಪಾಯಕಾರಿ. ಜನರು ಅವರೊಂದಿಗೆ ಮಾತನಾಡಲು ಭಯಪಡುತ್ತಾರೆ. ಮೊದಲು ಅಮಿತ್ ಶಾ ಅವರನ್ನು ನಿಯಂತ್ರಿಸುವಂತೆ ನಾನು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇನೆ. ಅವರು ಇಲ್ಲಿ ಗಲಭೆಗಳನ್ನು ಪ್ರಚೋದಿಸುತ್ತಿದ್ದಾರೆ "ಎಂದು ಬ್ಯಾನರ್ಜಿ ಪುರ್ಬಾ ಬರ್ಧಮನ್ ಜಿಲ್ಲೆಯ ಮೇಮರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಾ ಹೇಳಿದರು.
"ಎಲ್ಲಾ ರೀತಿಯ ಅನೈತಿಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಿ" ಎಂದು ಅಮಿತ್ ಶಾ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು "ಬಂಗಾಳದ ಗೌರವವನ್ನು ರಕ್ಷಿಸುವ" ಪ್ರಯತ್ನವೆಂದು ಬಣ್ಣಿಸಿದರು. ಶಾ ಅವರ ಆಜ್ಞೆಯ ಮೇರೆಗೆ ಕೇಂದ್ರ ಪೊಲೀಸ್ ಪಡೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಬ್ಯಾನರ್ಜಿ ಈ ಹಿಂದೆ ಆರೋಪಿಸಿದ್ದರು.