ಕರ್ನಾಟಕ

karnataka

By

Published : Jan 20, 2022, 11:09 AM IST

ETV Bharat / bharat

ಜಲ್ಲಿಕಟ್ಟು ಸ್ಪರ್ಧೆ ವೇಳೆ ಗೂಳಿಗಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಬಂಧನ! VIDEO

ತಮಿಳುನಾಡಿನ ಸಾಂಪ್ರದಾಯಿಕ ಸ್ಪರ್ಧೆಯಾದ ಜಲ್ಲಿಕಟ್ಟು ಆಚರಣೆ ವೇಳೆ ಗೂಳಿಗಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Man arrested for attacking bulls with stick during Jallikattu festival in Madurai
ಜಲ್ಲಿಕಟ್ಟು ಸ್ಪರ್ಧೆ ವೇಳೆ ಗೂಳಿಗಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಬಂಧನ

ಪಾಲಮೇಡು(ತಮಿಳುನಾಡು): ಜಲ್ಲಿಕಟ್ಟು ಆಚರಣೆ ವೇಳೆ ಗೂಳಿಗಳಿಗೆ ದೊಣ್ಣೆಯಿಂದ ಹೊಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಧುರೈ ಜಿಲ್ಲೆಯ ಪಾಲಮೇಡು ಎಂಬಲ್ಲಿ ಜನವರಿ 15ರಂದು ಪೊಂಗಲ್ ಹಬ್ಬದ ಪ್ರಯುಕ್ತ ಜಲ್ಲಿಕಟ್ಟು ಸ್ಪರ್ಧೆ ನಡೆಸಲಾಗಿತ್ತು. ವೇಳೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಅಲ್ಲಿದ್ದ ವ್ಯಕ್ತಿಗಳು ಮತ್ತು ಗೂಳಿಗಳ ಮೇಲೆ ಹಲ್ಲೆ ಮಾಡಿದ್ದನು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಮಧುರೈ ಎಸ್​ಪಿ ವಿ.ಭಾಸ್ಕರನ್ ತಿಳಿಸಿದ್ದಾರೆ.

ಗೂಳಿಗಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ

ಜಲ್ಲಿಕಟ್ಟು ತಮಿಳುನಾಡಿನ ಸಾಂಪ್ರದಾಯಿಕ ಸ್ಪರ್ಧೆಯಾಗಿದ್ದು, ರಾಜ್ಯದ ಹಲವಾರು ಭಾಗಗಳಲ್ಲಿ ಸುಗ್ಗಿಯ ಹಬ್ಬವಾದ ಪೊಂಗಲ್‌ನಂದು ಆಡಲಾಗುತ್ತದೆ.

ಇದನ್ನೂ ಓದಿ: ಮಹಿಳೆ ಕೊಲೆ ಪ್ರಕರಣ: ಏಳು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತ್ರಿಪುರಾ ಕೋರ್ಟ್​

ABOUT THE AUTHOR

...view details