ಕರ್ನಾಟಕ

karnataka

ಪತ್ನಿ, ತಂಗಿಯನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

By

Published : Jan 29, 2022, 9:14 AM IST

Updated : Jan 29, 2022, 9:22 AM IST

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಸ್ವಂತ ಸಹೋದರಿ ಸೇರಿದಂತೆ ಧರ್ಮಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ.

Man Commits Suicide After Killing Wife and Sister in AndhraPradesh, Man Commits Suicide in AndhraPradesh, Man Killing Wife and Sister in AndhraPradesh, AndhraPradesh crime news, ಪತ್ನಿ ಮತ್ತು ತಂಗಿಯನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆಂಧ್ರಪ್ರದೇಶದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು, ಆಂಧ್ರಪ್ರದೇಶದಲ್ಲಿ ಹೆಂಡ್ತಿ ಮತ್ತು ತಂಗಿಯನ್ನು ಕೊಲೆ ಮಾಡಿದ ವ್ಯಕ್ತಿ, ಆಂಧ್ರಪ್ರದೇಶ ಅಪರಾಧ ಸುದ್ದಿ
ಪತ್ನಿ, ತನ್ನ ತಂಗಿಯನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಶ್ರೀಕಾಕುಳಂ:ಎಚ್ಚರ್ಲ ತಾಲೂಕಿ ಮುದ್ದಾಡಪೇಟ್​ದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಹೆಂಡ್ತಿಯ ಜೊತೆ ಸಹೋದರಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಿಂದಾಗಿ ಜಿಲ್ಲೆಯ ಜನತೆ ದಿಗ್ಭ್ರಮೆಗೊಂಡಿದ್ದಾರೆ.

ಮುದ್ದಾಡಪೇಟೆ ನಿವಾಸಿ ವಿ.ಸಿ ಅಪ್ಪನ್ನ ತನ್ನ ಹೆಂಡ್ತಿ ಅಪ್ಪಮ್ಮ ಮತ್ತು ಸಹೋದರಿ ಲಕ್ಷ್ಮಿಯನ್ನು ಕುಡಿದ ಮತ್ತಿನಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ, ಅಡ್ಡ ಬಂದ ತಂದೆ ಮತ್ತು ಇನ್ನೊಬ್ಬಳ ಸಹೋದರಿಗೆ ಗಾಯಗೊಳಿಸಿದ್ದಾರೆ. ಬಳಿಕ ಅಪ್ಪನ್ನ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಓದಿ:ವಿಶ್ವಾದ್ಯಂತ ಬಂಗಾರಕ್ಕೆ ಹೆಚ್ಚಿದ ಬೇಡಿಕೆ: ಇಟಿಎಫ್​​​​​​​​​​​​​​ ನಿಧಿಯಲ್ಲಿ ಭಾರಿ ಕುಸಿತ!

ಈ ಸುದ್ದಿಯನ್ನು ಸ್ಥಳೀಯರ ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 29, 2022, 9:22 AM IST

For All Latest Updates

ABOUT THE AUTHOR

...view details