ಮಥುರಾ( ಉತ್ತರಪ್ರದೇಶ):ಶ್ರೀ ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ಮಸೀದಿ ವಿವಾದದ ವಿಚಾರಣೆಯನ್ನು ಮಥುರಾದ ಸಿವಿಲ್ ಕೋರ್ಟ್ ಜುಲೈ 1 ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಹಿರಿಯ ಸಿವಿಲ್ ಜಡ್ಜ್ ಕೋರ್ಟ್ ಜುಲೈ 1 ರಂದು ಈ ಬಗ್ಗೆ ವಿಚಾರಣೆ ನಡೆಸಲಿದೆ. ಮಥುರಾ ಮಸೀದಿಯಲ್ಲೂ ವಿಡಿಯೊ ಸಮೀಕ್ಷೆ ನಡೆಸುವಂತೆ ಕೋರಿ ಇತ್ತೀಚೆಗೆ ಅರ್ಜಿ ಸಲ್ಲಿಸಲಾಗಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಮಾಡಿದಂತೆ ಇಲ್ಲೂ ವಿಡಿಯೋ ಸಮೀಕ್ಷೆ ನಡೆಯಬೇಕು. ಮಸೀದಿ ಆವರಣದಲ್ಲಿ ಹಿಂದೂ ಕಲಾಕೃತಿಗಳು ಮತ್ತು ಪುರಾತನ ಧಾರ್ಮಿಕ ಶಾಸನಗಳು ಇವೆ ಎನ್ನಲಾಗಿದೆ. ಹೀಗಾಗಿ ವಿಡಿಯೋ ಸಮೀಕ್ಷೆ ನಡೆಸಿದರೆ ಇವೆಲ್ಲ ಕುರುಹುಗಳು ಇವೆಯೋ ಇಲ್ಲವೇ ಎಂಬ ಬಗ್ಗೆ ತಿಳಿದುಕೊಳ್ಳಲು ಸಮೀಕ್ಷೆ ನೆರವಿಗೆ ಬರಲಿದೆ ಎಂದು ಮಥುರಾ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಶಾಹಿ ಈದ್ಗಾ ಮಸೀದಿಯೊಳಗೆ ಎಲ್ಲರಿಗೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಕೋರ್ಟ್ ಮೊರೆ ಹೋಗಿತ್ತು.