ಕರ್ನಾಟಕ

karnataka

ರಜನಿಕಾಂತ್ ನಿರ್ಧಾರದಿಂದ ನನಗೂ ನಿರಾಶೆಯಾಗಿದೆ: ಕಮಲ್ ಹಾಸನ್

By

Published : Dec 30, 2020, 12:13 PM IST

ನನ್ನ ಚುನಾವಣಾ ಪ್ರಚಾರದ ನಂತರ ಮತ್ತೆ ರಜನಿಕಾಂತ್ ಅವರನ್ನು ಭೇಟಿಯಾಗುತ್ತೇನೆ, ಅವರ ಆರೋಗ್ಯ ನನಗೆ ಮುಖ್ಯವಾಗಿದೆ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ.

Kamal Haasan
ಕಮಲ್ ಹಾಸನ್

ಚೆನ್ನೈ (ತಮಿಳುನಾಡು): ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುವುದಾಗಿ ರಜನಿಕಾಂತ್ ಘೋಷಿಸಿದ್ದರಿಂದ ನನಗೂ ನಿರಾಶೆಯಾಗಿದೆ ಎಂದು ಮಕ್ಕಳ್ ನೀಧಿ ಮಯ್ಯಮ್ ಪಕ್ಷದ (ಎಂಎನ್‌ಎಂ) ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ.

ಅಧಿಕ ರಕ್ತದೊತ್ತಡದಿಂದ ಹೈದರಾಬಾದ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂಪರ್ ಸ್ಟಾರ್​ ರಜನಿಕಾಂತ್, ಆಸ್ಪತ್ರೆಯಿಂದ ಬಿಡುಗಡೆಯಾದ ಮರು ದಿನ ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

"ನನ್ನ ಚುನಾವಣಾ ಪ್ರಚಾರದ ನಂತರ ನಾನು ಮತ್ತೆ ರಜನಿಕಾಂತ್ ಅವರನ್ನು ಭೇಟಿಯಾಗುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಶೆಯಾಗಿದೆ. ಆದರೆ ಅವರ ಆರೋಗ್ಯ ನನಗೆ ಮುಖ್ಯವಾಗಿದೆ. ಅವರು ಆರೋಗ್ಯವಾಗಿರಬೇಕು ಮತ್ತು ಚೆನ್ನಾಗಿರಬೇಕು" ಎಂದು ಕಮಲ್ ಹಾಸನ್ ನಾಗಪಟ್ಟಣಂ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಓದಿತಲೈವಾಗೆ ‘ದೇವರ ಎಚ್ಚರಿಕೆಯ ಕರೆ’! ಸದ್ಯಕ್ಕೆ ಪಕ್ಷ ಸ್ಥಾಪನೆ ಮಾಡದಿರಲು ರಜನಿಕಾಂತ್ ನಿರ್ಧಾರ

ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಘೋಷಿಸಿದ್ದ ರಜನಿಕಾತ್​, ಜನರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದಿದ್ದರು.

ರಜನಿಕಾಂತ್ ಅವರು 2021ರ ಜನವರಿಯಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ನಿರೀಕ್ಷೆಯಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 234 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿತ್ತು ಎಂದು ರಜನಿ ಅವರ ರಾಜಕೀಯ ಸಲಹೆಗಾರ ತಮಿಳರುವಿ ಮಣಿಯನ್ ಹೇಳಿದ್ದಾರೆ.

ABOUT THE AUTHOR

...view details