ನವದೆಹಲಿ: ಅಫ್ಘಾನಿಸ್ತಾನದ ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಚ್ಚೆತ್ತುಕೊಂಡು ಭಾರತದ ನಾಗರಿಕರು, ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹಿಂದಿರುಗಿಸುವ ಭಾರತದ ನೀತಿಯನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕಾಂಗ್ರೆಸ್ ಪಕ್ಷವು ಭಾರತದ ಹಿತಾಸಕ್ತಿಗಳನ್ನು ರಕ್ಷಿಸಲು ದೃಢವಾಗಿ ನಿಂತಿದೆ ಮತ್ತು ಹಾಗೆ ಭಾರತ ಸರ್ಕಾರದಿಂದ ರಾಜತಾಂತ್ರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಇಷ್ಟೆಲ್ಲಾ ಘಟನೆ ಹೊರತಾಗಿಯೂ ನರೇಂದ್ರ ಮೋದಿ ಸರ್ಕಾರದ ಮೌನವು ತುಂಬಾ ಗೊಂದಲಮಯವಾಗಿದೆ. ಮೋದಿ ಸರ್ಕಾರವು ನಮ್ಮ ನಾಗರಿಕರನ್ನು ಸ್ಥಳಾಂತರಿಸುವ ಉತ್ತಮ ಚಿಂತನೆಯ ಯೋಜನೆಯನ್ನು ಹೊಂದಲು ನಿರಾಕರಿಸುವುದು ಸ್ವೀಕಾರಾರ್ಹವಲ್ಲ ಎಂದು ಹರಿಹಾಯ್ದಿದ್ದಾರೆ.