ಕರ್ನಾಟಕ

karnataka

ETV Bharat / bharat

ಅಕ್ರಮ ಹಣ ವರ್ಗಾವಣೆ ಕೇಸ್​​: ದೆಹಲಿ ಇಡಿ ವಿಶೇಷ ನ್ಯಾಯಾಲಯದಿಂದ ಡಿಕೆಶಿಗೆ ಜಾಮೀನು ವಿಸ್ತರಣೆ - Etv bharat kannada

ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ವಿಸ್ತರಣೆ ಮಾಡಿದೆ.

ಡಿಕೆಶಿ
Etv money laundering case DKSBharat

By

Published : Aug 2, 2022, 5:25 PM IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ದೆಹಲಿಯ ಪಿಎಂಎಲ್​ಎ ವಿಶೇಷ ನ್ಯಾಯಾಲಯದಿಂದ ಜಾಮೀನು ವಿಸ್ತರಣೆಯಾಗಿದೆ. ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಈ ಆದೇಶ ಪ್ರಕಟಿಸಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿಕೆಶಿ ಹಾಗೂ ಇತರೆ ನಾಲ್ವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗದಂತೆಯೂ ಹಾಗೂ 1 ಲಕ್ಷ ರೂ. ಶ್ಯೂರಿಟಿ ಮೇಲೆ ಈ ಹಿಂದೆ ಡಿಕೆಶಿಗೆ ಜಾಮೀನು ನೀಡಲಾಗಿತ್ತು. ಇದೀಗ ಅದನ್ನು ವಿಸ್ತರಿಸಲಾಗಿದೆ. ಪ್ರಕರಣದಲ್ಲಿ ಇತರ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರಿಗೂ ಷರತ್ತುಬದ್ಧ ಜಾಮೀನು ದೊರೆತಿದೆ.

ರಾಜ್ಯ ಸರ್ಕಾರವು 2019ರ ಸೆಪ್ಟೆಂಬರ್‌ನ​ಲ್ಲಿ ಅಕ್ರಮ ಆಸ್ತಿ ಹೊಂದಿದ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿದ್ದು, ಆ ಪ್ರಕಾರ 2020ರ ಅಕ್ಟೋಬರ್ 3 ರಂದು ಕೇಂದ್ರೀಯ ತನಿಖಾ ದಳವು ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲಿಸಿದೆ. ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಕುರಿತು ಡಿಕೆಶಿ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ:ಇಂದು ED ಕೋರ್ಟ್ ಜಾಮೀನು ತೀರ್ಪು ಹಿನ್ನೆಲೆ: ದೆಹಲಿಗೆ ತೆರಳಿದ ಡಿಕೆಶಿ

ಕೇಂದ್ರೀಯ ತನಿಖಾ ದಳವು ತಮ್ಮ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಎಫ್​ಐಆರ್​ ರದ್ದುಪಡಿಸಬೇಕೆಂದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠ ಪ್ರತಿವಾದಿಗಳಾದ ಸಿಬಿಐ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಇಂದು ಅರ್ಜಿ ವಿಚಾರಣೆ ಮುಂದೂಡಿದೆ.

ನ್ಯಾಯಾಲಯದಲ್ಲಿ ಸೋಮವಾರ ನಡೆದ ವಿಚಾರಣೆಯಲ್ಲಿ ಅರ್ಜಿದಾರ ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ಅರವಿಂದ ಜಾಧವ್ ವಾದ ಮಂಡಿಸಿದ್ದು, ಸಿಬಿಐ ಎಫ್​ಐಆರ್ ದಾಖಲಿಸಿರುವ ಔಚಿತ್ಯ ಪ್ರಶ್ನಿಸಿದರು. 1989ರಿಂದ ಇಲ್ಲಿಯವರೆಗೆ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿಕೆಶಿ, ಹಲವು ಬಾರಿ ಸಚಿವರೂ ಆಗಿದ್ದಾರೆ.

ABOUT THE AUTHOR

...view details