ಕರ್ನಾಟಕ

karnataka

By

Published : Jul 1, 2021, 12:28 PM IST

ETV Bharat / bharat

ಅನಾರೋಗ್ಯ: ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಅನಾರೋಗ್ಯ ಹಿನ್ನೆಲೆ ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

mulayam singh
ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಲಖನೌ (ಉತ್ತರ ಪ್ರದೇಶ): ಹಠಾತ್ತನೆ ಆರೋಗ್ಯ ಹದಗೆಟ್ಟ ಕಾರಣ ಸಮಾಜವಾದಿ ಪಕ್ಷ (ಎಸ್ಪಿ)ದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಅವರನ್ನು ಗುರುಗ್ರಾಮ್‌ನ ಮೇದಾಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

2020ರ ಅಕ್ಟೋಬರ್​ನಲ್ಲಿ ಕೋವಿಡ್​ ಸೋಂಕು ತಗುಲಿ ಅದರಿಂದ ಮುಲಾಯಂ ಸಿಂಗ್ ಗುಣಮುಖರಾಗಿದ್ದರು. ಜೂನ್ 7 ರಂದು ಕೊರೊನಾ ಲಸಿಕೆಯ ಮೊದಲ ಡೋಸ್​ ಹಾಕಿಸಿಕೊಂಡಿದ್ದರು. ಆದರೆ, ಕಳೆದೆರಡು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆ ಅನೇಕ ಬಾರಿ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಮಾಜವಾದಿ ಪಕ್ಷವನ್ನು ಸ್ಥಾಪಿಸಿದ್ದ ಮುಲಾಯಂ ಸಿಂಗ್ ಯಾದವ್, ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಹಾಗೂ ಹೆಚ್​ ಡಿ ದೇವೇಗೌಡ ಅವರು ಪ್ರಧಾನಿಯಾಗಿದ್ದ ವೇಳೆ ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ABOUT THE AUTHOR

...view details