ನವದೆಹಲಿ:ಪ್ರತಿಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರ ಮೇಲೆ ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ಸುಪ್ರೀಂಕೋರ್ಟ್ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಈ ಬಗ್ಗೆ ತನಿಖೆ ನಡೆಸಿದ ತಾಂತ್ರಿಕ ಸಮಿತಿ ನೀಡಿದ ವರದಿಯಾಧರಿಸಿ ಕೋರ್ಟ್ ಈ ನಿರ್ಧಾರಕ್ಕೆ ಬಂದಿದೆ.
ದೇಶದ ಯಾರ ವಿರುದ್ಧವೂ ಪೆಗಾಸಸ್ ಸ್ಪೇವೇರ್ ಬಳಸಿ ರಹಸ್ಯ ಕಾರ್ಯಾಚರಣೆ ನಡೆಸಿಲ್ಲ. ಇದನ್ನು ಸಾಬೀತು ಪಡಿಸುವ ಅಂಶಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಕೇಂದ್ರ ಸರ್ಕಾರ ಸಹಕರಿಸಿಲ್ಲ ಎಂದೂ ಸಮಿತಿ ತಿಳಿಸಿದೆ ಎಂಬುದನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾ.ಸೂರ್ಯಕಾಂತ್ ಮತ್ತು ನ್ಯಾ.ಹಿಮಾಕೊಹ್ಲಿ ಅವರಿದ್ದ ಪೀಠ ಇದೇ ವೇಳೆ ಹೇಳಿದೆ.
ಪೆಗಾಸಸ್ ಸ್ಪೈವೇರ್ ಬಳಸಿ ನಡೆದಿದೆ ಎಂದು ಹೇಳಲಾದ ಗೂಢಚರ್ಯೆ ಬಗ್ಗೆ ತಿಳಿಯಲು 29 ಮೊಬೈಲ್ಗಳನ್ನು ತನಿಖೆಯ ವೇಳೆ ಪರಿಶೀಲಿಸಲಾಗಿದೆ. ಆದರೆ, ಯಾವುದೇ ರಹಸ್ಯ ಕಾರ್ಯಾಚರಣೆ ನಡೆಸಿದ ಬಗ್ಗೆ ತಿಳಿದುಬಂದಿಲ್ಲ. ಪೆಗಾಸಸ್ ಸೇರಿ 5 ಸ್ಪೈವೇರ್ಗಳೇ ಕಳಪೆ ಸೈಬರ್ ಭದ್ರತೆಯನ್ನು ಹೊಂದಿವೆ ಎಂಬುದನ್ನು ಸಮಿತಿ ಕಂಡುಕೊಂಡಿದೆ.