ಪಾಟ್ನಾ (ಬಿಹಾರ):ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೇಶದ ರಾಜಕೀಯದ ಮೇಲೆ ಕಣ್ಣಿಟ್ಟಿದ್ದಾರೆ. ಅದನ್ನು ಕಾರ್ಯರೂಪಕ್ಕೆ ತರಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ನಿರತರಾಗಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಿತೀಶ್ ಕುಮಾರ್ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ಮಾಡಿದರು. ಇನ್ನೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಬೇಕಿದೆ.
ಸಿಎಂ ನಿತೀಶ್ಗಿದೆ ದೊಡ್ಡ ಸವಾಲು:ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಇಂದು ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ನಂತರ ಲಕ್ನೋಗೆ ತೆರಳಲಿದ್ದಾರೆ. ಲಕ್ನೋದಲ್ಲಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವೂ ಇದೆ. ಒಂದೆಡೆ ಬಿಜೆಪಿ ಮುಕ್ತ ಭಾರತವಾಗಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಲು ನಿತೀಶ್ ಪ್ರತಿಪಾದಿಸುತ್ತಿದ್ದಾರೆ. ಮತ್ತೊಂದೆಡೆ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಬಿಜೆಪಿ ಮುಕ್ತ ಭಾರತವನ್ನು ಬಯಸುತ್ತಾರೆ.
ಆದರೆ, ಅದಕ್ಕಾಗಿ ಕಾಂಗ್ರೆಸ್ ಜೊತೆ ಹೋಗಲು ಸಿದ್ಧರಿಲ್ಲ. ಕಳೆದ ತಿಂಗಳು ಅಖಿಲೇಶ್ ಯಾದವ್ ಅವರು ಮಮತಾ ಬ್ಯಾನರ್ಜಿ ಅವರನ್ನು ಕಾಳಿಘಾಟ್ನಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಇಬ್ಬರೂ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಲು ಪ್ರತಿಪಾದಿಸಿದ್ದರು. ಇದರೊಂದಿಗೆ ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಳ್ಳುವ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ.
ಮುಂದುವರಿದ ತೀವ್ರ ವಾಗ್ದಾಳಿ:ಒಂದೆಡೆ ಬಿಜೆಪಿ ತೆಗಳಿಕೆಯಲ್ಲಿ ತೊಡಗಿದ್ದರೆ, ಮತ್ತೊಂದೆಡೆ ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರ ಪಠಿಸುವುದಲ್ಲಿ ನಿರತರಾಗಿದ್ದಾರೆ. ಬಿಹಾರದಿಂದ ಆರಂಭವಾಗಿರುವ ಕೇಂದ್ರದ ಹಾಲಿ ಸರ್ಕಾರದ ಪ್ರತಿಪಕ್ಷಗಳ ಒಗ್ಗಟ್ಟಿನ ಅಭಿಯಾನವನ್ನು ಇಡೀ ದೇಶದಲ್ಲಿ ಮಾಡಲಾಗುವುದು ಎಂದು ಜೆಡಿಯು ಮುಖ್ಯ ವಕ್ತಾರ ನೀರಜ್ ಕುಮಾರ್ ಹೇಳಿದ್ದಾರೆ. ಮತ್ತೊಂದೆಡೆ, ಬಿಹಾರದಲ್ಲಿ ವಿಪಕ್ಷಗಳ ಒಗ್ಗಟ್ಟು ಹೇಗೆ ನಡೆಯುತ್ತಿದೆಯೋ, ಅದೇ ರೀತಿ ರೀತಿಯ ವಿಪಕ್ಷಗಳ ಒಗ್ಗಟ್ಟು ಕೂಡಾ ದೇಶಾದ್ಯಂತ ರಂಗು ಪಡೆದಿದೆ ಎಂದು ಆರ್ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ತಿಳಿಸಿದ್ದಾರೆ.
ಮೋದಿ ಸರ್ಕಾರ ಕಿತ್ತೊಗೆಯಲಾಗುವುದು -ತಿವಾರಿ:"2024ರಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವ ಪ್ರತಿಜ್ಞೆ ಮಾಡುವ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಚಾರದಲ್ಲಿ ನಿತೀಶ್, ತೇಜಸ್ವಿ ಅವರು ತೊಡಗಿಸಿಕೊಂಡಿರುವ ರೀತಿ. ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಅವರೊಂದಿಗೆ ಸಿಎಂ ನಿತೀಶ್ ಭೇಟಿಯು ಫಲಿತಾಂಶ ತರಲಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಈ ಒಗ್ಗಟ್ಟು ಪ್ರಸ್ತುತ ಕೇಂದ್ರದಲ್ಲಿರುವ ಮೋದಿ ಸರ್ಕಾರವನ್ನು ಕಿತ್ತೊಗೆಯಲಾಗುವುದು'' ಎಂದು ಆರ್ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದರು.
"ಬಿಜೆಪಿಯೇತರ ರಾಜಕೀಯ ಪಕ್ಷಗಳು ಹಾಗೂ ಪ್ರತಿಪಕ್ಷಗಳ ಒಗ್ಗಟ್ಟಿನ ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. 2024ರಲ್ಲಿ ದೇಶದಲ್ಲಿ ಮತ್ತೊಮ್ಮೆ ಪ್ರತಿಪಕ್ಷಗಳ ಒಗ್ಗಟ್ಟು ಪ್ರಬಲವಾಗಲಿದೆ ಹಾಗೂ ಕೇಂದ್ರದಲ್ಲಿ ಮೋದಿ ಸರ್ಕಾರ ಉರುಳಿಸಲಿದೆ" ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದರು.