ಕರ್ನಾಟಕ

karnataka

ETV Bharat / bharat

ರಾಹುಲ್ ಗಾಂಧಿ ಮಾವೋವಾದಿ ಚಿಂತನೆಗಳ ಹಿಡಿತಕ್ಕೆ ಸಿಲುಕಿದ್ದಾರೆ: ಬಿಜೆಪಿ ವಾಗ್ದಾಳಿ - ಮಾವೋವಾದಿ ಚಿಂತನೆಗಳ ಹಿಡಿತ

ವಿದೇಶಗಳಲ್ಲಿ ಭಾರತ ಮತ್ತು ಆರ್​ಎಸ್​ಎಸ್​ ಸಂಘಟನೆಯನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕ್ರಮಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ರಾಹುಲ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆಯಾ ಎಂದು ಬಿಜೆಪಿ ಪ್ರಶ್ನಿಸಿದೆ.

Our clear conviction Rahul in grip of Maoist thought process anarchist elements BJP
Our clear conviction Rahul in grip of Maoist thought process anarchist elements BJP

By

Published : Mar 7, 2023, 6:12 PM IST

ನವದೆಹಲಿ: ಬ್ರಿಟನ್​ಗೆ ಹೋಗಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಆರ್​ಎಸ್​ಎಸ್​ ಬಗ್ಗೆ ಟೀಕೆ ಮಾಡುತ್ತಿರುವ ರಾಹುಲ್ ಗಾಂಧಿ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿ ಸಂಪೂರ್ಣವಾಗಿ ಮಾವೋವಾದಿ ಚಿಂತನೆಗಳ ಹಿಡಿತದಲ್ಲಿದ್ದಾರೆ ಎಂಬುದು ಅವರ ಮಾತುಗಳಿಂದ ಸ್ಪಷ್ಟವಾಗುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿಯವರ ಹೇಳಿಕೆ ಸಂಪೂರ್ಣ ಬೇಜವಾಬ್ದಾರಿ ಮತ್ತು ನಾಚಿಕೆಗೇಡಿನದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಕಾಂಗ್ರೆಸ್‌ನ ಚುನಾಯಿತ ಅಧ್ಯಕ್ಷರು ಎಂದು ನೀವು ಭಾವಿಸಿದರೆ ನಾವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳುತ್ತೇವೆ- ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಮರಳಿ ಸ್ಥಾಪಿಸಲು ಅಮೆರಿಕ ಮತ್ತು ಯುರೋಪ್ ಮಧ್ಯಪ್ರವೇಶಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಜವಾಬ್ದಾರಿ ಮತ್ತು ನಾಚಿಕೆಗೇಡಿನ ಹೇಳಿಕೆಯನ್ನು ನೀವು ಬೆಂಬಲಿಸುತ್ತೀರಾ? ರಾಹುಲ್ ಗಾಂಧಿಯವರ ಹೇಳಿಕೆಯನ್ನು ನೀವು ಬೆಂಬಲಿಸದಿದ್ದರೆ ಅದನ್ನು ತಿರಸ್ಕರಿಸಿ ಎಂದು ರವಿಶಂಕರ್ ಪ್ರಸಾದ್ ಸವಾಲು ಹಾಕಿದರು.

ಸೋನಿಯಾಗಾಂಧಿಗೆ ಬಿಜೆಪಿ ಪ್ರಶ್ನೆ: ಸೋನಿಯಾ ಗಾಂಧಿಯವರೆ, ನಿಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಬಿಜೆಪಿ ನಿಮ್ಮನ್ನು ಒತ್ತಾಯಿಸುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಅಮೆರಿಕ ಮತ್ತು ಯುರೋಪ್ ಹಸ್ತಕ್ಷೇಪ ಮಾಡುವಂತೆ ಕೇಳಿದ ನಿಮ್ಮ ಮಗನ ಸಂಪೂರ್ಣ ಬೇಜವಾಬ್ದಾರಿ ಹೇಳಿಕೆಯನ್ನು ನೀವು ಎಷ್ಟರಮಟ್ಟಿಗೆ ಬೆಂಬಲಿಸುವಿರಿ ಎಂದು ಪ್ರಸಾದ್ ಪ್ರಶ್ನಿಸಿದರು. ಏತನ್ಮಧ್ಯೆ ಲೋಕಸಭೆಯ ವಿಶೇಷಾಧಿಕಾರ ಸಮಿತಿಯು ಮಾರ್ಚ್ 10 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತಪ್ಪುದಾರಿಗೆಳೆಯುವ, ಅವಹೇಳನಕಾರಿ, ಅಸಂಸದೀಯ ಮತ್ತು ದೋಷಾರೋಪಣೆಯ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಶೇಷ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಭಾರತೀಯ ಜನತಾ ಪಕ್ಷದ ಬೇಡಿಕೆಯನ್ನು ಆಲಿಸಲಿದೆ. ಬಿಜೆಪಿ ನಾಯಕ ಶೆಹಜಾದ್ ಪೂನವಾಲಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ದ್ವೇಷದ ಭರದಲ್ಲಿ ರಾಹುಲ್ ಗಾಂಧಿ ಎಲ್ಲ ಮಿತಿಗಳನ್ನು ಮೀರಿದ್ದಾರೆ ಎಂದರು.

ರಾಹುಲ್​ ಸ್ವಿಚ್ಡ್​ ಆಫ್​​​​​​​ ಹೇಳಿಕೆ ರಿಜಿಜು ತಿರುಗೇಟು:ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಆಗಾಗ್ಗೆ ಸ್ವಿಚ್ಡ್​ ಆಫ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ತಿರುಗೇಟು ನೀಡಿದ್ದಾರೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರೇ ಅತಿ ಹೆಚ್ಚು ಮಾತನಾಡುವುದು ಎಂದು ಸಚಿವ ರಿಜಿಜು ತಿರುಗೇಟು ನೀಡಿದರು. ಬಿಜೆಪಿ ಸಂಸದ ವಿವೇಕ್ ಠಾಕೂರ್ ಕೂಡ ರಾಹುಲ್ ಅವರ ಕೇಂಬ್ರಿಡ್ಜ್‌ ಭಾಷಣದ ಬಗ್ಗೆ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಬೇರೊಂದು ದೇಶದ ಅಜೆಂಡಾವನ್ನು ಬೆಂಬಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಲಂಡನ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ ಎಂದು ಹೇಳಿದ್ದರು. ಭಾರತದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸ್ವರೂಪವು ಸಂಪೂರ್ಣವಾಗಿ ಬದಲಾಗಿದೆ. ಇದಕ್ಕೆ ಕಾರಣ ಆರ್​ಎಸ್ಎಸ್​ ಎಂಬ ಒಂದು ಸಂಘಟನೆ. ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿರುವ ಇದು ಮೂಲತಃ ಭಾರತದ ಎಲ್ಲಾ ಸಂಸ್ಥೆಗಳನ್ನು ಆಕ್ರಮಿಸಿದೆ ಎಂದು ರಾಹುಲ್ ಟೀಕಿಸಿದ್ದರು.

ಇದನ್ನೂ ಓದಿ : ಅಟ್ಟುಕಲ್ ಪೊಂಗಲ್: ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ದೇವಿಗೆ ಮೊರೆಯಿಟ್ಟ ಪುಟಾಣಿಗಳು..

ABOUT THE AUTHOR

...view details