ನವದೆಹಲಿ:ಕೋವಿಡ್-19 ಎರಡನೇ ಅಲೆಯ ಭೀತಿಯ ಬೆನ್ನಲ್ಲೇ, ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯ ಜನರು ವ್ಯಾಕ್ಸಿನೇಷನ್ ಹಾಕಿಸಿಕೊಂಡಿಲ್ಲ ಎಂದು ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೋಮವಾರ ಕಳವಳ ವ್ಯಕ್ತಪಡಿಸಿದೆ.
ರಾಜ್ಯಸಭೆಯಲ್ಲಿ ಮಂಡಿಸಲಾದ ಅನುದಾನದ ಬೇಡಿಕೆಯ ಕುರಿತು ಸಮಿತಿಯು ತನ್ನ 231 ಪುಟಗಳ ವರದಿಯಲ್ಲಿ, ಇದುವರೆಗೂ ಭಾರತೀಯ ಜನಸಂಖ್ಯೆಯ ಶೇಕಡಾ 1 ಕ್ಕಿಂತಲೂ ಕಡಿಮೆ ಜನರಿಗೆ ಲಸಿಕೆ ನೀಡಲಾಗಿದೆ. ಈ ದರದಲ್ಲಿ, ಇಡೀ ಜನಸಂಖ್ಯೆಗೆ ಲಸಿಕೆ ಹಾಕಲು ಹಲವು ವರ್ಷಗಳನ್ನೇ ತೆಗೆದುಕೊಳ್ಳಬಹುದು ಎಂದು ತಿಳಿಸಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ 24 ಗಂಟೆಯೊಳಗೆ 15,051 ಕೋವಿಡ್ ಪಾಸಿಟಿವ್ : 48 ಮಂದಿ ಸಾವು
ಕೊರೊನಾ ವೈರಸ್ ರೂಪಾಂತರಗೊಳ್ಳುತ್ತಿರುವುದರಿಂದ ಮತ್ತು ಕೋವಿಡ್ -19 ರ ಹೊಸ ರೂಪಾಂತರಗಳು ವಿಶ್ವದ ವಿವಿಧ ಭಾಗಗಳಲ್ಲಿ ವರದಿಯಾಗುತ್ತಿರುವುದರಿಂದ ಇದು ತುಂಬಾ ಗಂಭೀರ ವಿಷಯವಾಗಿದೆ ಎಂದು ಸಮಿತಿ ಹೇಳಿದೆ.