ಕರ್ನಾಟಕ

karnataka

ETV Bharat / bharat

ಬಜೆಟ್​ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ - ಬಜೆಟ್​ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದ್ದು, ಕೇಂದ್ರ ಸರ್ಕಾರ ಸುಗಮ ಕಲಾಪ ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ, ಸರ್ವಪಕ್ಷಗಳ ಸಭೆ ಕರೆದಿದೆ. ಜನವರಿ 31 ರಂದು ವರ್ಚುಯಲ್​ ಆಗಿ ಸರ್ವಪಕ್ಷ ಸಭೆ ನಡೆಯಲಿದೆ.

ಬಜೆಟ್​ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಬಜೆಟ್​ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

By

Published : Jan 26, 2022, 2:08 PM IST

ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಬಜೆಟ್​​​ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜನವರಿ 31 ರಂದು ಈ ಸಭೆ ವರ್ಚುಯಲ್​ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಈ ವೇಳೆ ಕೋರಲಿದ್ದಾರೆ.

ಫೆಬ್ರವರಿ 1 ರಂದೇ ಬಜೆಟ್​ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಮಹತ್ವ ಪಡೆದುಕೊಂಡಿದೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ, ಸಂಸತ್​ ಕಲಾಪ ಸುಗಮವಾಗಿ ನಡೆಯುಂತಾಗಲು ಎಲ್ಲರ ಸಹಕಾರ ಅಗತ್ಯ ಇದೆ. ಈ ಬಗ್ಗೆ ಚರ್ಚಿಸುವ ಉದ್ದೇಶದಿಂದ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಉಭಯ ಸದನಗಳ ಕಾರ್ಯ ಕಲಾಪಗಳು ಸರಳವಾಗಿ ಹಾಗೂ ಸುಗಮವಾಗಿ ನಡೆಯಲು ತಮ್ಮೆಲ್ಲರ ಸಹಕಾರ ಕೋರುತ್ತೇನೆ. ಈ ಸಂಬಂಧದ ಸಭೆ ಜನವರಿ 31 ರ ಮಧ್ಯಾಹ್ನ 3 ಗಂಟೆಗೆ ವರ್ಚುಯಲ್​ ಮೂಲಕ ನಡೆಯಲಿದ್ದು, ಎಲ್ಲ ನಾಯಕರು ಭಾಗವಹಿಸುವಂತೆ ಸಚಿವರು ಕೋರಿದ್ದಾರೆ.

ಬಜೆಟ್​ ಅಧಿವೇಶನ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಜನವರಿ 31ರಿಂದ ಫೆಬ್ರವರಿ 11 ರವರೆಗೂ ಹಾಗೂ ಎರಡನೇ ಹಂತ ಮಾರ್ಚ್​ 14 ರಿಂದ ಏಪ್ರಿಲ್​ 8 ರವರೆಗೆ ನಡೆಯಲಿದೆ. ಕೋವಿಡ್​ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ರಾಜ್ಯಸಭಾ ಕಲಾಪ ಹಾಗೂ ಲೋಕಸಭಾ ಕಲಾಪಗಳು ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9 ರವರೆಗೆ ನಡೆಯಲಿದೆ.

ಇದನ್ನು ಓದಿ:ರತ್ನ, ಚಿನ್ನಾಭರಣ ರಫ್ತು ಶೇ. 71ರಷ್ಟು ಹೆಚ್ಚಳ

For All Latest Updates

ABOUT THE AUTHOR

...view details