ಕರ್ನಾಟಕ

karnataka

ETV Bharat / bharat

ತೆಲಂಗಾಣದ ಜನರು ಅಭಿವೃದ್ಧಿಗೆ ಬದಲಾವಣೆ ಬಯಸಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್​

Telangana Assembly Election 2023: ತೆಲಂಗಾಣದಲ್ಲಿ ಕಾಂಗ್ರೆಸ್​ ಮುನ್ನಡೆ ಸಾಧಿಸುತ್ತಿದ್ದು, ಕರ್ನಾಟಕ ರಾಜ್ಯದ ಕಾಂಗ್ರೆಸ್​ನ ಪ್ರಮುಖ​ ನಾಯಕರು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ

By ETV Bharat Karnataka Team

Published : Dec 3, 2023, 1:43 PM IST

DCM DK Shivakumar and Minister Sharanprakash Rudrappa Patil
ಡಿಸಿಎಂ ಡಿಕೆಶಿ ಹಾಗೂ ಸಚಿವ ಶರಣಪ್ರಕಾಶ್​ ರುದ್ರಪ್ಪ ಪಾಟೀಲ್

ಹೈದರಾಬಾದ್:ತೆಲಂಗಾಣದ ಜನರು ರಾಜ್ಯದ ಪ್ರಗತಿ ಹಾಗೂ ಅಭಿವೃದ್ಧಿಗಾಗಿ ಬದಲಾವಣೆ ಆಗಬೇಕು ಎಂದು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆ ಹೈದರಾಬಾದ್​ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್​ ನಾಯಕ ರೇವಂತ್​ ರೆಡ್ಡಿ ಅವರು ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ, ಟೀಮ್​ ಲೀಡರ್​ ಆಗಿದ್ದಾರೆ. ಮುಖ್ಯಮಂತ್ರಿ ಯಾರು ಎನ್ನುವುದರ ಬಗ್ಗೆ ನಮ್ಮ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಗೆಲುವಿಗಾಗಿ ಹೋರಾಡಲಾಗಿದೆ. ನಾನು ಕೆಸಿಆರ್​ ಅಥವಾ ಕೆಟಿಆರ್ ಬಗ್ಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ತೆಲಂಗಾಣದ ಜನತೆ ಅವರಿಗೆ ಉತ್ತರ ನೀಡಿದ್ದಾರೆ ಎಂದು ಹೇಳಿದರು.​

ಹೈದರಾಬಾದ್​ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾಂಗ್ರೆಸ್​ ಮುಖಂಡ ಹಾಗೂ ಕರ್ನಾಟಕ ಸಚಿವ ಶರಣಪ್ರಕಾಶ್​ ರುದ್ರಪ್ಪ ಪಾಟೀಲ್ "ತೆಲಂಗಾಣದಲ್ಲಿ 70ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕಾಂಗ್ರೆಸ್​ ಸರ್ಕಾರ ರಚಿಸುತ್ತದೆ. ಕಾಂಗ್ರೆಸ್​ ಒಗ್ಗಟ್ಟಾಗಿದ್ದು, ಸಾಮೂಹಿಕ ಪ್ರಯತ್ನದಿಂದ ತೆಲಂಗಾಣದಲ್ಲಿ ಕಾಂಗ್ರೆಸ್​ ಮತ್ತೆ ಅಧಿಕಾರಕ್ಕೆ ಬಂದಿದೆ" ಎಂದು ​ಅಭಿಪ್ರಾಯಪಟ್ಟಿದ್ದಾರೆ.

"ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಹಿನ್ನಡೆಯಾಗಿದೆ. ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನಂತರ ಕಾಂಗ್ರೆಸ್​ ಹೈಕಮಾಂಡ್​ ಶಾಸಕರೊಂದಿಗೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಿದೆ" ಎಂದು ತಿಳಿಸಿದರು.

ಇದನ್ನೂ ಓದಿ:'ನಮಗೆ ಯಾವ ಆಪರೇಷನ್ ಭೀತಿಯೂ ಇಲ್ಲ': ಹೈದರಾಬಾದ್​ನಲ್ಲಿ ಡಿಕೆಶಿ

ABOUT THE AUTHOR

...view details