ಉತ್ತರಾಖಂಡ್ (ಡೆಹ್ರಾಡೂನ್):ಡೆಹ್ರಾಡೂನ್ನ ಚಂದ್ರಬಾನಿ ಚಿಯೋಲಾ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಪರಿಣಾಮ ಇಲ್ಲಿನ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿದ್ದು, ನೀರಿನ ರಭಸಕ್ಕೆ ಹಸುವೊಂದು ಕೊಚ್ಚಿಕೊಂಡು ಹೋಗಿದೆ.
ಚಂದ್ರಬಾನಿ ಸಾಹಸಪುರ ವಿಧಾನಸಭೆಯ ಮುಖ್ಯರಸ್ತೆಯಲ್ಲಿ ಭಾರಿ ಮಳೆಗೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಬಲವಾದ ಪ್ರವಾಹದ ಹೊಡೆತದಿಂದ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.