ಕರ್ನಾಟಕ

karnataka

By

Published : Jul 3, 2021, 4:04 AM IST

ETV Bharat / bharat

ಕಾಶ್ಮೀರದಲ್ಲಿ ಕಂದಕಕ್ಕೆ ವಾಹನ ಉರುಳಿ ಐದು ಮಂದಿ ದುರ್ಮರಣ: ಪ್ರಧಾನಿ ಸಂತಾಪ

ಪ್ಯಾಸೆಂಜರ್ ವಾಹನವೊಂದು ಕಂದಕಕ್ಕೆ ಉರುಳಿ ಐದು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

PM Modi condoles death of five people in road accident in J&Ks Ramban
ಕಾಶ್ಮೀರದಲ್ಲಿ ಕಂದಕಕ್ಕೆ ವಾಹನ ಉರುಳಿ ಐದು ಮಂದಿ ದುರ್ಮರಣ: ಪ್ರಧಾನಿ ಸಂತಾಪ

ರಾಂಬನ್, ಜಮ್ಮು ಕಾಶ್ಮೀರ :ಕಂದಕದೊಳಗೆ ವಾಹನ ಉರುಳಿ ಐದು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ಐದು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಂಬನ್​​ನ ರಾಜ್ಯ ಹೆದ್ದಾರಿ 44ರಲ್ಲಿ ಪ್ಯಾಸೆಂಜರ್ ವಾಹನವೊಂದು ಮತ್ತೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿಯಾಗಿ, ಆಳ ಕಂದರಕ್ಕೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಚೇರಿ ದುರಂತದಲ್ಲಿ ಮೃತಪಟ್ಟರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ:ಮಾನಹಾನಿಕಾರಕ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತರಲು ಕಾರಣ ಬಹಿರಂಗಪಡಿಸಿದ ಡಿವಿಎಸ್​

ABOUT THE AUTHOR

...view details